<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 57ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬುಧವಾರದಿಂದ ಸಾಕ್ಷಿಗಳ ವಿಚಾರಣೆ ಆರಂಭ ಆಗಲಿದೆ.</p><p>ಸಾಕ್ಷಿಗಳ ವಿಚಾರಣೆಗೂ ಮುನ್ನ ಪ್ರಾಸಿಕ್ಯೂಷನ್ ಪರ ವಕೀಲರು ಹಾಗೂ ತನಿಖಾಧಿಕಾರಿಗಳು ಸಿದ್ಧತೆ ನಡೆಸಿದರು. ಕೃತ್ಯ ನಡೆದಿರುವ ವಿವಿಧ ಸ್ಥಳಕ್ಕೆ ಎಸ್ಪಿಪಿ ಪ್ರಸನ್ನಕುಮಾರ್, ಸಹಾಯಕ ಎಪಿಪಿ ಸಚಿನ್ ಹಾಗೂ ತನಿಖಾಧಿಕಾರಿ ಎಸಿಪಿ ಚಂದನ್ ಅವರು ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ರೇಣುಕಸ್ವಾಮಿ ಮೃತದೇಹ ಎಸೆದಿದ್ದ ರಾಜಕಾಲುವೆ ಬಳಿಯ ಸ್ಥಳ, ಹಲ್ಲೆ ನಡೆದಿದ್ದ ಪಟ್ಟಣಗೆರೆಯ ಶೆಡ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<p>ವಿಚಾರಣೆ ವೇಳೆ ಹಾಜರಿರುವಂತೆ ಸೂಚಿಸಿ ರೇಣುಕಸ್ವಾಮಿ ಅವರ ತಂದೆ ಹಾಗೂ ತಾಯಿಗೆ (ಸಾಕ್ಷಿ ಸಂಖ್ಯೆ 7 ಹಾಗೂ 8) ನ್ಯಾಯಾಲಯವು ಡಿಸೆಂಬರ್ 4ರಂದು ಸಮನ್ಸ್ ಜಾರಿಗೊಳಿಸಿತ್ತು. ಬುಧವಾರ ನಡೆಯುವ ವಿಚಾರಣೆ ವೇಳೆ ಅವರು ಹಾಜರಾಗುವ ಸಾಧ್ಯತೆಯಿದೆ.</p>.<p>ಒಟ್ಟು 272 ಸಾಕ್ಷಿಗಳ ಪಟ್ಟಿಯನ್ನು ಸಹಾಯಕ ಪ್ರಾಸಿಕ್ಯೂಟರ್(ಎಪಿಪಿ) ಸಚಿನ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.</p>.<p>ಪ್ರಮುಖ ಸಾಕ್ಷಿಗಳಾಗಿರುವ ರೇಣುಕಸ್ವಾಮಿ ಅವರ ತಂದೆ–ತಾಯಿಯನ್ನು ಪಾಟಿ ಸವಾಲಿಗೆ ಒಳಪಡಿಸಬೇಕಿದೆ ಎಂದು ಹಿಂದಿನ ವಿಚಾರಣೆ ವೇಳೆ ಸಚಿನ್ ಅವರು ನ್ಯಾಯಾಧೀಶರನ್ನು ಕೋರಿದ್ದರು. ಪವಿತ್ರಾಗೌಡ, ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳ ಪರ ವಕೀಲರು ಆ ಮನವಿಗೆ ಆಕ್ಷೇಪಿಸಿದ್ದರು. ವಾದ–ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಸಾಕ್ಷಿಗಳಿಗೆ ಸಮನ್ಸ್ ಜಾರಿ ಮಾಡಿದ್ದರು.</p>
<p><strong>ಬೆಂಗಳೂರು</strong>: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 57ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬುಧವಾರದಿಂದ ಸಾಕ್ಷಿಗಳ ವಿಚಾರಣೆ ಆರಂಭ ಆಗಲಿದೆ.</p><p>ಸಾಕ್ಷಿಗಳ ವಿಚಾರಣೆಗೂ ಮುನ್ನ ಪ್ರಾಸಿಕ್ಯೂಷನ್ ಪರ ವಕೀಲರು ಹಾಗೂ ತನಿಖಾಧಿಕಾರಿಗಳು ಸಿದ್ಧತೆ ನಡೆಸಿದರು. ಕೃತ್ಯ ನಡೆದಿರುವ ವಿವಿಧ ಸ್ಥಳಕ್ಕೆ ಎಸ್ಪಿಪಿ ಪ್ರಸನ್ನಕುಮಾರ್, ಸಹಾಯಕ ಎಪಿಪಿ ಸಚಿನ್ ಹಾಗೂ ತನಿಖಾಧಿಕಾರಿ ಎಸಿಪಿ ಚಂದನ್ ಅವರು ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ರೇಣುಕಸ್ವಾಮಿ ಮೃತದೇಹ ಎಸೆದಿದ್ದ ರಾಜಕಾಲುವೆ ಬಳಿಯ ಸ್ಥಳ, ಹಲ್ಲೆ ನಡೆದಿದ್ದ ಪಟ್ಟಣಗೆರೆಯ ಶೆಡ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ಮೂಲಗಳು ಹೇಳಿವೆ.</p>.<p>ವಿಚಾರಣೆ ವೇಳೆ ಹಾಜರಿರುವಂತೆ ಸೂಚಿಸಿ ರೇಣುಕಸ್ವಾಮಿ ಅವರ ತಂದೆ ಹಾಗೂ ತಾಯಿಗೆ (ಸಾಕ್ಷಿ ಸಂಖ್ಯೆ 7 ಹಾಗೂ 8) ನ್ಯಾಯಾಲಯವು ಡಿಸೆಂಬರ್ 4ರಂದು ಸಮನ್ಸ್ ಜಾರಿಗೊಳಿಸಿತ್ತು. ಬುಧವಾರ ನಡೆಯುವ ವಿಚಾರಣೆ ವೇಳೆ ಅವರು ಹಾಜರಾಗುವ ಸಾಧ್ಯತೆಯಿದೆ.</p>.<p>ಒಟ್ಟು 272 ಸಾಕ್ಷಿಗಳ ಪಟ್ಟಿಯನ್ನು ಸಹಾಯಕ ಪ್ರಾಸಿಕ್ಯೂಟರ್(ಎಪಿಪಿ) ಸಚಿನ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.</p>.<p>ಪ್ರಮುಖ ಸಾಕ್ಷಿಗಳಾಗಿರುವ ರೇಣುಕಸ್ವಾಮಿ ಅವರ ತಂದೆ–ತಾಯಿಯನ್ನು ಪಾಟಿ ಸವಾಲಿಗೆ ಒಳಪಡಿಸಬೇಕಿದೆ ಎಂದು ಹಿಂದಿನ ವಿಚಾರಣೆ ವೇಳೆ ಸಚಿನ್ ಅವರು ನ್ಯಾಯಾಧೀಶರನ್ನು ಕೋರಿದ್ದರು. ಪವಿತ್ರಾಗೌಡ, ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳ ಪರ ವಕೀಲರು ಆ ಮನವಿಗೆ ಆಕ್ಷೇಪಿಸಿದ್ದರು. ವಾದ–ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಸಾಕ್ಷಿಗಳಿಗೆ ಸಮನ್ಸ್ ಜಾರಿ ಮಾಡಿದ್ದರು.</p>