<p><strong>ಬೆಂಗಳೂರು</strong>: ‘ಪದ್ಮನಾಭನಗರ ಬಡಾವಣೆಯ ಮುಖ್ಯರಸ್ತೆಯಲ್ಲಿರುವ ಕಾರ್ಮೆಲ್ ಕನ್ನಡ ಶಾಲೆಗೆ ಅಂಟಿಕೊಂಡ ಅಂದಾಜು ಮೂರು ಸಾವಿರ ಚದರಡಿಯ ಆಟದ ಮೈದಾನವನ್ನುಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿಗೆ) ಹಸ್ತಾಂತರಿಸಬೇಕು’ ಎಂದು ಕೋರಿ ಬಿಬಿಎಂಪಿ, ಬಿಡಿಎಗೆ (ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ) ಬರೆದಿರುವ ಪತ್ರ ಮತ್ತು ಈ ಸಂಬಂಧದ ಪರಭಾರೆ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಕುರಿತಂತೆ ಜಯನಗರ ಕೋ–ಆಪರೇಟಿವ್ ಹೌಸಿಂಗ್ ಸೊಸೈಟಿ ಲಿಮಿಟೆಡ್ ಕಾರ್ಯದರ್ಶಿ ಎಂ.ಶಿವಣ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ‘ಖಾಸಗಿ ಕನ್ನಡ ಮಾಧ್ಯಮ ಶಾಲೆಯಾದ ಕಾರ್ಮೆಲ್ ವಿದ್ಯಾಸಂಸ್ಥೆಯಲ್ಲಿ ಎಲ್.ಕೆ.ಜಿ.ಯಿಂದ ಏಳನೇ ತರಗತಿಯವರಿಗೆ ಸುಮಾರು 400 ಮಕ್ಕಳು ಕಲಿಯುತ್ತಿದ್ದಾರೆ. 15 ಮಂದಿ ಬೋಧಕರಿದ್ದಾರೆ. ಈಗ ಏಕಾಏಕಿ ಈ ಪ್ರದೇಶವನ್ನು ಬಿಡಿಎ ತನಗೆ ಹಸ್ತಾಂತರಿಸಬೇಕು ಎಂದು ಬಿಬಿಎಂಪಿ ಕೋರಿದೆ. ಈ ಕೋರಿಕೆಯ ಹಿಂದೆ ಸ್ಥಳೀಯ ಶಾಸಕರೂ ಆದ ಕಂದಾಯ ಸಚಿವ ಆರ್.ಅಶೋಕ್ ಅವರ ನೇರ ಕುಮ್ಮಕ್ಕು ಇದೆ. ಆದ್ದರಿಂದ, ಈ ಜಾಗದ ಪರಭಾರೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.</p>.<p>ಈ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಹಾಗಾದರೆ ಸಚಿವರನ್ನೂ ಇದರಲ್ಲಿ ಪಾರ್ಟಿ ಮಾಡಬೇಕಲ್ಲವೇ‘ ಎಂದು ಪ್ರಶ್ನಿಸಿತು.ಇದಕ್ಕೆ ಉತ್ತರಿಸಿದ ವೆಂಕಟೇಶ್ ದಳವಾಯಿ, ‘ಸ್ವಾಮಿ, ಸಚಿವರು ಸೂಚನೆ ನೀಡಿರುವುದಕ್ಕೆ ದಾಖಲೆ ಇಲ್ಲ. ಆದ್ದರಿಂದ, ಅವರ ಬದಲಿಗೆ ಈಗಿರುವ ಪ್ರತಿವಾದಿಗಳಿಗೇ ತಾವು ಆದೇಶ ಮಾಡಬಹುದು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಬಿಬಿಎಂಪಿ ದಕ್ಷಿಣ ವಲಯದ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಬಿಡಿಎ ಪ್ರದೇಶಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.</p>.<p class="Subhead">ಪ್ರಕರಣವೇನು?: ’182ನೇ ವಾರ್ಡ್ನಲ್ಲಿ ಕಾರ್ಮೆಲ್ ಶಾಲೆ ನಡೆಸಲು ಬಿಡಿಎ ಅನುಮತಿ ನೀಡಿದೆ. 30 ವರ್ಷಗಳ ಗುತ್ತಿಗೆ ಅವಧಿ 2022ರ ಫೆಬ್ರುವರಿಗೆ ಮುಕ್ತಾಯಗೊಂಡಿರುವುದರಿಂದ ಮುಂದಿನ ಅವಧಿಗೆ ವಿದ್ಯಾಸಂಸ್ಥೆ ಮುಂದು<br />ವರಿಸಲು ಅನುಮತಿ ನೀಡಬಾರದು ಎಂದು ಸ್ಥಳೀಯ ಶಾಸಕರೂ ಆದ ಸಚಿವರು ಸೂಚಿಸಿರುತ್ತಾರೆ’ ಎಂದು ಬಿಬಿಎಂಪಿ ಅಧಿಕಾರಿಗಳು ಬಿಡಿಎಗೆ ಪತ್ರ ಬರೆದು ಮೈದಾನವನ್ನು ಹಸ್ತಾಂತರಿಸಲು ಕೋರಿ ಪತ್ರ ಬರೆದಿದ್ದಾರೆ.</p>.<p>‘ಸಾರ್ವಜನಿಕರು ಹಾಗೂ ಪಾಲಿಕೆಯ ಆಸ್ತಿಯನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದು ಅತ್ಯವಶ್ಯವಿದೆ ಎಂದು ಬಿಬಿಎಂಪಿ ದಕ್ಷಿಣ ವಲಯದ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಕಳೆದ ತಿಂಗಳ 10ರಂದು ಪತ್ರ ಬರೆದಿದ್ದಾರೆ. ಕಂದಾಯ ಸಚಿವರ ಸೂಚನೆಯಂತೆಈ ಪ್ರದೇಶವನ್ನು ಪಾಲಿಕೆಗೆ ಹಸ್ತಾಂತರಿಸಬೇಕು’ ಎಂದೂ ಈ ಪತ್ರದಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪದ್ಮನಾಭನಗರ ಬಡಾವಣೆಯ ಮುಖ್ಯರಸ್ತೆಯಲ್ಲಿರುವ ಕಾರ್ಮೆಲ್ ಕನ್ನಡ ಶಾಲೆಗೆ ಅಂಟಿಕೊಂಡ ಅಂದಾಜು ಮೂರು ಸಾವಿರ ಚದರಡಿಯ ಆಟದ ಮೈದಾನವನ್ನುಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿಗೆ) ಹಸ್ತಾಂತರಿಸಬೇಕು’ ಎಂದು ಕೋರಿ ಬಿಬಿಎಂಪಿ, ಬಿಡಿಎಗೆ (ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ) ಬರೆದಿರುವ ಪತ್ರ ಮತ್ತು ಈ ಸಂಬಂಧದ ಪರಭಾರೆ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.</p>.<p>ಈ ಕುರಿತಂತೆ ಜಯನಗರ ಕೋ–ಆಪರೇಟಿವ್ ಹೌಸಿಂಗ್ ಸೊಸೈಟಿ ಲಿಮಿಟೆಡ್ ಕಾರ್ಯದರ್ಶಿ ಎಂ.ಶಿವಣ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ‘ಖಾಸಗಿ ಕನ್ನಡ ಮಾಧ್ಯಮ ಶಾಲೆಯಾದ ಕಾರ್ಮೆಲ್ ವಿದ್ಯಾಸಂಸ್ಥೆಯಲ್ಲಿ ಎಲ್.ಕೆ.ಜಿ.ಯಿಂದ ಏಳನೇ ತರಗತಿಯವರಿಗೆ ಸುಮಾರು 400 ಮಕ್ಕಳು ಕಲಿಯುತ್ತಿದ್ದಾರೆ. 15 ಮಂದಿ ಬೋಧಕರಿದ್ದಾರೆ. ಈಗ ಏಕಾಏಕಿ ಈ ಪ್ರದೇಶವನ್ನು ಬಿಡಿಎ ತನಗೆ ಹಸ್ತಾಂತರಿಸಬೇಕು ಎಂದು ಬಿಬಿಎಂಪಿ ಕೋರಿದೆ. ಈ ಕೋರಿಕೆಯ ಹಿಂದೆ ಸ್ಥಳೀಯ ಶಾಸಕರೂ ಆದ ಕಂದಾಯ ಸಚಿವ ಆರ್.ಅಶೋಕ್ ಅವರ ನೇರ ಕುಮ್ಮಕ್ಕು ಇದೆ. ಆದ್ದರಿಂದ, ಈ ಜಾಗದ ಪರಭಾರೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿದರು.</p>.<p>ಈ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಹಾಗಾದರೆ ಸಚಿವರನ್ನೂ ಇದರಲ್ಲಿ ಪಾರ್ಟಿ ಮಾಡಬೇಕಲ್ಲವೇ‘ ಎಂದು ಪ್ರಶ್ನಿಸಿತು.ಇದಕ್ಕೆ ಉತ್ತರಿಸಿದ ವೆಂಕಟೇಶ್ ದಳವಾಯಿ, ‘ಸ್ವಾಮಿ, ಸಚಿವರು ಸೂಚನೆ ನೀಡಿರುವುದಕ್ಕೆ ದಾಖಲೆ ಇಲ್ಲ. ಆದ್ದರಿಂದ, ಅವರ ಬದಲಿಗೆ ಈಗಿರುವ ಪ್ರತಿವಾದಿಗಳಿಗೇ ತಾವು ಆದೇಶ ಮಾಡಬಹುದು’ ಎಂದು ಕೋರಿದರು.</p>.<p>ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಬಿಬಿಎಂಪಿ ದಕ್ಷಿಣ ವಲಯದ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಬಿಡಿಎ ಪ್ರದೇಶಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.</p>.<p class="Subhead">ಪ್ರಕರಣವೇನು?: ’182ನೇ ವಾರ್ಡ್ನಲ್ಲಿ ಕಾರ್ಮೆಲ್ ಶಾಲೆ ನಡೆಸಲು ಬಿಡಿಎ ಅನುಮತಿ ನೀಡಿದೆ. 30 ವರ್ಷಗಳ ಗುತ್ತಿಗೆ ಅವಧಿ 2022ರ ಫೆಬ್ರುವರಿಗೆ ಮುಕ್ತಾಯಗೊಂಡಿರುವುದರಿಂದ ಮುಂದಿನ ಅವಧಿಗೆ ವಿದ್ಯಾಸಂಸ್ಥೆ ಮುಂದು<br />ವರಿಸಲು ಅನುಮತಿ ನೀಡಬಾರದು ಎಂದು ಸ್ಥಳೀಯ ಶಾಸಕರೂ ಆದ ಸಚಿವರು ಸೂಚಿಸಿರುತ್ತಾರೆ’ ಎಂದು ಬಿಬಿಎಂಪಿ ಅಧಿಕಾರಿಗಳು ಬಿಡಿಎಗೆ ಪತ್ರ ಬರೆದು ಮೈದಾನವನ್ನು ಹಸ್ತಾಂತರಿಸಲು ಕೋರಿ ಪತ್ರ ಬರೆದಿದ್ದಾರೆ.</p>.<p>‘ಸಾರ್ವಜನಿಕರು ಹಾಗೂ ಪಾಲಿಕೆಯ ಆಸ್ತಿಯನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಈ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದು ಅತ್ಯವಶ್ಯವಿದೆ ಎಂದು ಬಿಬಿಎಂಪಿ ದಕ್ಷಿಣ ವಲಯದ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಕಳೆದ ತಿಂಗಳ 10ರಂದು ಪತ್ರ ಬರೆದಿದ್ದಾರೆ. ಕಂದಾಯ ಸಚಿವರ ಸೂಚನೆಯಂತೆಈ ಪ್ರದೇಶವನ್ನು ಪಾಲಿಕೆಗೆ ಹಸ್ತಾಂತರಿಸಬೇಕು’ ಎಂದೂ ಈ ಪತ್ರದಲ್ಲಿ ವಿವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>