ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪ್ರದೀಪ್ ನಾಯಕ್, ‘ಮರಗಳ ಅಧಿಕಾರಿಯು ತಜ್ಞರ ಸಮಿತಿಯ ಭಾಗವಾಗಿರಬಾರದು. ಆದರೆ, ಇಲ್ಲಿ ಮರಗಳನ್ನು ಕಡಿಯಲು ಅಧಿಕೃತ ಅನುಮತಿ ನೀಡಿರುವ ಅಧಿಕಾರಿಯು ಮರಗಳ ಸಮಿತಿಯಲ್ಲೂ ಸ್ಥಾನ ಪಡೆದಿದ್ದಾರೆ. ಆದ್ದರಿಂದ, ಅಧಿಕಾರಿ ಭಾಗವಾಗಿರುವ ಮರ ತಜ್ಞರ ಸಮಿತಿ ಹಾಗೂ ಮರ ಅಧಿಕಾರಿ ನೀಡುವ ಒಪ್ಪಿಗೆ ಆಧರಿಸಿ ಮರ ತೆರವು ಅಥವಾ ಸ್ಥಳಾಂತರ ಮಾಡಬಾರದು’ ಎಂದು ಆಕ್ಷೇಪಿಸಿದರು.