ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನವ ಪ್ರಪಂಚದ ಪಿತಾಮಹ’ನ ಪಿಐಎಲ್‌ ವಜಾ..!

Last Updated 27 ಏಪ್ರಿಲ್ 2022, 18:07 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ನವ ಪ್ರಪಂಚದ ಪಿತಾಮಹ. 66 ವರ್ಷದ ಹಿರಿಯ ನಾಗರಿಕ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯ ನಿವಾಸಿ...! ನನ್ನ ಮನವಿ ಏನೆಂದರೆ; ರಾಜ್ಯದಲ್ಲಿ2023ರ ರಾಜ್ಯ ವಿಧಾನಸಭಾ ಚುನಾವಣೆ ನಡೆಸಬಾರದು!! ಬದಲಿಗೆ ಎಲ್ಲಾ ರಾಜಕೀಯ ಪಕ್ಷಗಳಿಂದಜನಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿಯೊಂದನ್ನು ಹೈಕೋರ್ಟ್‌ ವಜಾಗೊಳಿಸಿದೆ.

ನಗರದಮುರಳಿ ಕೃಷ್ಣ ಬ್ರಹ್ಮಾನಂದಂ ಎಂಬುವರು ಸಲ್ಲಿಸಿದ್ದ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ಮತ್ತು ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ,‘ಇವರ ಮನವಿ ತಪ್ಪು ಕಲ್ಪನೆಯಿಂದ ಕೂಡಿದ್ದುಜನತಾ ಪ್ರತಿನಿಧಿ ಕಾಯ್ದೆ– 1951ರಕಾಯ್ದೆಯ ನಿಯಮಗಳನ್ನು ಪ್ರಶ್ನಿಸಿದ ಅಡಿಯಲ್ಲಿ ವಿಚಾರಣೆ ನಡೆಸಲು ಅವಕಾಶವಿಲ್ಲ’ ಎಂದು ತಿಳಿಸಿದೆ.

ಅರ್ಜಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ, ಮುಖ್ಯ ಚುನಾವಣಾ ಆಯುಕ್ತರು ಮತ್ತು ರಾಜಭವನದ ಕಾರ್ಯದರ್ಶಿಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿತ್ತು. ‘ಕರ್ನಾಟಕದ ಆಡಳಿತವನ್ನು ಸೂಕ್ತವಾಗಿ ಪುನರ್ ರಚಿಸಲು ಮಧ್ಯಂತರ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಪ್ರತಿವಾದಿಗಳು ನನ್ನನ್ನು ಕೇಳಬೇಕು. ಇದಕ್ಕೆ ಕೋರ್ಟ್‌ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT