<p><strong>ಬೆಂಗಳೂರು</strong>: ‘ಅಸಾಂವಿಧಾನಿಕ ಬುದ್ಧಗಯಾ ಟ್ರಸ್ಟ್ (ಬಿ.ಟಿ) ಕಾಯ್ದೆ–1949 ರದ್ದುಗೊಳಿಸಬೇಕು. ಬಿಹಾರದ ಬುದ್ಧಗಯಾ ಮಹಾಬೋಧಿ ಮಹಾವಿಹಾರದ ಆಡಳಿತದ ಸಂಪೂರ್ಣ ಜವಾಬ್ದಾರಿಯನ್ನು ಬೌದ್ಧರಿಗೆ ನೀಡಬೇಕು’ ಎಂದು ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂನ ಪ್ರಧಾನ ಕಾರ್ಯದರ್ಶಿ ಆಕಾಶ್ ಲಾಮಾ ಆಗ್ರಹಿಸಿದರು. </p>.<p>ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಗುರುವಾರ ಆಯೋಜಿಸಿದ್ದ ಕರ್ನಾಟಕ ಬೌದ್ಧರ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಸ್ವಾತಂತ್ರ್ಯ ನಂತರ ಬಿ.ಟಿ–1949 ಕಾಯ್ದೆ ರಚಿಸಲಾಗಿತ್ತು. ಈ ಕಾಯ್ದೆಯಡಿ ಬಿಹಾರದ ಗಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾಲ್ವರು ಬೌದ್ಧರು, ನಾಲ್ವರು ಹಿಂದೂಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬುದ್ಧಗಯಾದ ಮಹಾಬೋಧಿ ಮಹಾವಿಹಾರದ ಆಡಳಿತವನ್ನು ನೋಡಿಕೊಳ್ಳುತ್ತಿದೆ. ಇದರಿಂದ ಬೌದ್ಧರಿಗೆ ಅನ್ಯಾಯವಾಗಿದೆ’ ಎಂದು ದೂರಿದರು.</p>.<p>‘ಸಂವಿಧಾನದ ಪ್ರಕಾರ ಸಿಖ್, ಮುಸ್ಲಿಂ, ಹಿಂದೂ ಸೇರಿ ಎಲ್ಲ ಧಾರ್ಮಿಕ ಕೇಂದ್ರಗಳ ಆಡಳಿತವನ್ನು ಆಯಾ ಧರ್ಮದವರೇ ನಿರ್ವಹಿಸುತ್ತಿದ್ದಾರೆ. ಆದರೆ, ಬೌದ್ಧರ ಧಾರ್ಮಿಕ ಕೇಂದ್ರದಲ್ಲಿ ಹಿಂದೂಗಳು ಆಡಳಿತ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ದೇಶದಲ್ಲಿ 84 ಸಾವಿರ ಬುದ್ಧ ವಿಹಾರಗಳು ಬೇರೆ ಸಮುದಾಯಗಳ ವಶದಲ್ಲಿವೆ. ಅವುಗಳನ್ನು ಮರಳಿ ಪಡೆದುಕೊಳ್ಳಲು ದೇಶದಾದ್ಯಂತ ಜನಾಂದೋಲನ ರೂಪಿಸಬೇಕು. ಈ ನಿಟ್ಟಿನಲ್ಲಿ ಬುದ್ಧಗಯಾದ ಮಹಾಬೋಧಿ ಮಹಾವಿಹಾರವನ್ನು ಹಿಂದೂಗಳ ಕಪಿಮುಷ್ಠಿಯಿಂದ ಹಿಂಪಡೆದುಕೊಳ್ಳಲು 128 ದಿನಗಳಿಂದ ಧರಣಿ ನಡೆಸುತ್ತಿದ್ದೇವೆ’ ಎಂದು ಹೇಳಿದರು. </p>.<p>‘ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬಿ.ಟಿ ಕಾಯ್ದೆ–1949 ರದ್ದುಗೊಳಿಸಬೇಕು. ಬುದ್ಧ ಗಯಾದಲ್ಲಿ ಬೌದ್ಧ ಧರ್ಮಕ್ಕೆ ಸೇರದವರನ್ನು ಹೊರಗಿಟ್ಟು ಮಹಾಬೋಧಿ ಮಹಾವಿಹಾರ ಆಡಳಿತವನ್ನು ಬೌದ್ಧರಿಗೆ ವಹಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಫೋರಂ ಸಲಹೆಗಾರ ಚಂದ್ರಕೀರ್ತಿ, ಭಾರತೀಯ ಬೌದ್ಧಬೋಧಿ ಮಹಾಸಭಾದ ಅಧ್ಯಕ್ಷ ಚಂದ್ರಬೋಧಿ ಪಾಟೀಲ್, ಉಪಾಧ್ಯಕ್ಷ ಎಂ. ವೆಂಕಟಸ್ವಾಮಿ, ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ಆರ್. ಮೋಹನ್ರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಸಾಂವಿಧಾನಿಕ ಬುದ್ಧಗಯಾ ಟ್ರಸ್ಟ್ (ಬಿ.ಟಿ) ಕಾಯ್ದೆ–1949 ರದ್ದುಗೊಳಿಸಬೇಕು. ಬಿಹಾರದ ಬುದ್ಧಗಯಾ ಮಹಾಬೋಧಿ ಮಹಾವಿಹಾರದ ಆಡಳಿತದ ಸಂಪೂರ್ಣ ಜವಾಬ್ದಾರಿಯನ್ನು ಬೌದ್ಧರಿಗೆ ನೀಡಬೇಕು’ ಎಂದು ಆಲ್ ಇಂಡಿಯಾ ಬುದ್ಧಿಸ್ಟ್ ಫೋರಂನ ಪ್ರಧಾನ ಕಾರ್ಯದರ್ಶಿ ಆಕಾಶ್ ಲಾಮಾ ಆಗ್ರಹಿಸಿದರು. </p>.<p>ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಗುರುವಾರ ಆಯೋಜಿಸಿದ್ದ ಕರ್ನಾಟಕ ಬೌದ್ಧರ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಸ್ವಾತಂತ್ರ್ಯ ನಂತರ ಬಿ.ಟಿ–1949 ಕಾಯ್ದೆ ರಚಿಸಲಾಗಿತ್ತು. ಈ ಕಾಯ್ದೆಯಡಿ ಬಿಹಾರದ ಗಯಾ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಾಲ್ವರು ಬೌದ್ಧರು, ನಾಲ್ವರು ಹಿಂದೂಗಳನ್ನು ಒಳಗೊಂಡಂತೆ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬುದ್ಧಗಯಾದ ಮಹಾಬೋಧಿ ಮಹಾವಿಹಾರದ ಆಡಳಿತವನ್ನು ನೋಡಿಕೊಳ್ಳುತ್ತಿದೆ. ಇದರಿಂದ ಬೌದ್ಧರಿಗೆ ಅನ್ಯಾಯವಾಗಿದೆ’ ಎಂದು ದೂರಿದರು.</p>.<p>‘ಸಂವಿಧಾನದ ಪ್ರಕಾರ ಸಿಖ್, ಮುಸ್ಲಿಂ, ಹಿಂದೂ ಸೇರಿ ಎಲ್ಲ ಧಾರ್ಮಿಕ ಕೇಂದ್ರಗಳ ಆಡಳಿತವನ್ನು ಆಯಾ ಧರ್ಮದವರೇ ನಿರ್ವಹಿಸುತ್ತಿದ್ದಾರೆ. ಆದರೆ, ಬೌದ್ಧರ ಧಾರ್ಮಿಕ ಕೇಂದ್ರದಲ್ಲಿ ಹಿಂದೂಗಳು ಆಡಳಿತ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ದೇಶದಲ್ಲಿ 84 ಸಾವಿರ ಬುದ್ಧ ವಿಹಾರಗಳು ಬೇರೆ ಸಮುದಾಯಗಳ ವಶದಲ್ಲಿವೆ. ಅವುಗಳನ್ನು ಮರಳಿ ಪಡೆದುಕೊಳ್ಳಲು ದೇಶದಾದ್ಯಂತ ಜನಾಂದೋಲನ ರೂಪಿಸಬೇಕು. ಈ ನಿಟ್ಟಿನಲ್ಲಿ ಬುದ್ಧಗಯಾದ ಮಹಾಬೋಧಿ ಮಹಾವಿಹಾರವನ್ನು ಹಿಂದೂಗಳ ಕಪಿಮುಷ್ಠಿಯಿಂದ ಹಿಂಪಡೆದುಕೊಳ್ಳಲು 128 ದಿನಗಳಿಂದ ಧರಣಿ ನಡೆಸುತ್ತಿದ್ದೇವೆ’ ಎಂದು ಹೇಳಿದರು. </p>.<p>‘ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಬಿ.ಟಿ ಕಾಯ್ದೆ–1949 ರದ್ದುಗೊಳಿಸಬೇಕು. ಬುದ್ಧ ಗಯಾದಲ್ಲಿ ಬೌದ್ಧ ಧರ್ಮಕ್ಕೆ ಸೇರದವರನ್ನು ಹೊರಗಿಟ್ಟು ಮಹಾಬೋಧಿ ಮಹಾವಿಹಾರ ಆಡಳಿತವನ್ನು ಬೌದ್ಧರಿಗೆ ವಹಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<p>ಫೋರಂ ಸಲಹೆಗಾರ ಚಂದ್ರಕೀರ್ತಿ, ಭಾರತೀಯ ಬೌದ್ಧಬೋಧಿ ಮಹಾಸಭಾದ ಅಧ್ಯಕ್ಷ ಚಂದ್ರಬೋಧಿ ಪಾಟೀಲ್, ಉಪಾಧ್ಯಕ್ಷ ಎಂ. ವೆಂಕಟಸ್ವಾಮಿ, ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ಆರ್. ಮೋಹನ್ರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>