<p><strong>ಬೆಂಗಳೂರು</strong>: ಜೈಲಿನಿಂದ ಹೊರ ಬಂದ ಬಳಿಕ ಒಟ್ಟಾಗಿ ಮನೆ ಕಳ್ಳತನ ಮಾಡುತ್ತಿದ್ದ ಮೂವರನ್ನು ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.</p>.<p>ತಿಲಕ್ನಗರದ ನಿವಾಸಿಗಳಾದ ಬಾಲರಾಜ್, ಗೌರವ್, ಪ್ರವೀಣ್ ಎಂಬುವರನ್ನು ಬಂಧಿಸಿ, 257 ಗ್ರಾಂ ಚಿನ್ನಾಭರಣ, ಮೊಬೈಲ್ ಸೇರಿ ₹31.27 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಾಲರಾಜ್ ಆರೋಪಿಯಾಗಿದ್ದು, ವಿವಿಧ ಠಾಣೆಗಳಲ್ಲಿ ಅವರ ವಿರುದ್ಧ 21 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದರು.</p>.<p>ಬಾಲರಾಜ್ ಜೈಲಿನಲ್ಲಿದ್ದ ವೇಳೆ ಗೌರವ್ ಹಾಗೂ ಪ್ರವೀಣ್ ಪರಿಚಯವಾಗಿದ್ದಾರೆ. ಹಲವು ಕಳ್ಳತನ, ದರೋಡೆ ಪ್ರಕರಣದಲ್ಲಿ ಇವರು ಜೈಲು ಸೇರಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಒಟ್ಟಿಗೆ ಕಳ್ಳತನ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಹೇಳಿದರು.</p>.<p>ನವೆಂಬರ್ 17ರಂದು ಬೈರಸಂದ್ರ 1ನೇ ಕ್ರಾಸ್ ನಿವಾಸಿಯೊಬ್ಬರು ಮನೆಯ ಸಮೀಪದ ಸ್ನೇಹಿತನ ಮನೆಗೆ ಹೋಗಿದ್ದರು. ಆಗ ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರು, ಹಳೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.</p>.<p>ಈ ಪೈಕಿ ಆರೋಪಿಯೊಬ್ಬ ಕಳ್ಳತನ ಮಾಡಿರುವುದು ಗೊತ್ತಾಯಿತು. ವಿಶೇಷ ತಂಡ ಕಾರ್ಯಾಚರಣೆ ನಡೆಸಿ, ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಚಿನ್ನದ ನಕ್ಲೇಸ್ ಸಮೇತ ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ತಿಳಿಸಿದರು.</p>.<p>ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಮತ್ತಿಬ್ಬರು ಸಹಚರರೊಂದಿಗೆ ಸೇರಿ ಚಿನ್ನಾಭರಣ, ಬೆಳ್ಳಿಯ ವಸ್ತು ಹಾಗೂ ನಗದು ಕಳವು ಮಾಡಿರುವುದಾಗಿ ಹೇಳಿದ್ದಾನೆ. ಆರೋಪಿಗಳಿಂದ ಕಳವು ಮಾಡಿದ್ದ ಆಭರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೈಲಿನಿಂದ ಹೊರ ಬಂದ ಬಳಿಕ ಒಟ್ಟಾಗಿ ಮನೆ ಕಳ್ಳತನ ಮಾಡುತ್ತಿದ್ದ ಮೂವರನ್ನು ಸಿದ್ಧಾಪುರ ಠಾಣೆ ಪೊಲೀಸರು ಬಂಧಿಸಿ, ಜೈಲಿಗೆ ಕಳುಹಿಸಿದ್ದಾರೆ.</p>.<p>ತಿಲಕ್ನಗರದ ನಿವಾಸಿಗಳಾದ ಬಾಲರಾಜ್, ಗೌರವ್, ಪ್ರವೀಣ್ ಎಂಬುವರನ್ನು ಬಂಧಿಸಿ, 257 ಗ್ರಾಂ ಚಿನ್ನಾಭರಣ, ಮೊಬೈಲ್ ಸೇರಿ ₹31.27 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಾಲರಾಜ್ ಆರೋಪಿಯಾಗಿದ್ದು, ವಿವಿಧ ಠಾಣೆಗಳಲ್ಲಿ ಅವರ ವಿರುದ್ಧ 21 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದರು.</p>.<p>ಬಾಲರಾಜ್ ಜೈಲಿನಲ್ಲಿದ್ದ ವೇಳೆ ಗೌರವ್ ಹಾಗೂ ಪ್ರವೀಣ್ ಪರಿಚಯವಾಗಿದ್ದಾರೆ. ಹಲವು ಕಳ್ಳತನ, ದರೋಡೆ ಪ್ರಕರಣದಲ್ಲಿ ಇವರು ಜೈಲು ಸೇರಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಒಟ್ಟಿಗೆ ಕಳ್ಳತನ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಹೇಳಿದರು.</p>.<p>ನವೆಂಬರ್ 17ರಂದು ಬೈರಸಂದ್ರ 1ನೇ ಕ್ರಾಸ್ ನಿವಾಸಿಯೊಬ್ಬರು ಮನೆಯ ಸಮೀಪದ ಸ್ನೇಹಿತನ ಮನೆಗೆ ಹೋಗಿದ್ದರು. ಆಗ ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರು, ಹಳೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.</p>.<p>ಈ ಪೈಕಿ ಆರೋಪಿಯೊಬ್ಬ ಕಳ್ಳತನ ಮಾಡಿರುವುದು ಗೊತ್ತಾಯಿತು. ವಿಶೇಷ ತಂಡ ಕಾರ್ಯಾಚರಣೆ ನಡೆಸಿ, ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಚಿನ್ನದ ನಕ್ಲೇಸ್ ಸಮೇತ ಆತನನ್ನು ವಶಕ್ಕೆ ಪಡೆಯಲಾಯಿತು ಎಂದು ತಿಳಿಸಿದರು.</p>.<p>ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಮತ್ತಿಬ್ಬರು ಸಹಚರರೊಂದಿಗೆ ಸೇರಿ ಚಿನ್ನಾಭರಣ, ಬೆಳ್ಳಿಯ ವಸ್ತು ಹಾಗೂ ನಗದು ಕಳವು ಮಾಡಿರುವುದಾಗಿ ಹೇಳಿದ್ದಾನೆ. ಆರೋಪಿಗಳಿಂದ ಕಳವು ಮಾಡಿದ್ದ ಆಭರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>