<p><strong>ಬೆಂಗಳೂರು:</strong> ‘ಏಕತೆ, ಸೇವಾ ಮನೋಭಾವ ಮತ್ತು ಸಾಮೂಹಿಕ ಜವಾಬ್ದಾರಿಯು ರಾಷ್ಟ್ರೀಯತೆಯ ಹೆಗ್ಗುರುತು ಎಂಬುದನ್ನು ಗಣರಾಜ್ಯೋತ್ಸವ ನೆನಪಿಸುತ್ತದೆ’ ಎಂದು ಫಿನಿಕ್ಸ್ ಮಾಲ್ ಆಫ್ ಏಷ್ಯಾದ ಮಾರುಕಟ್ಟೆ ನಿರ್ದೇಶಕ (ದಕ್ಷಿಣ) ರಿತು ಮೆಹ್ತಾ ಅಭಿಪ್ರಾಯಪಟ್ಟರು.</p>.<p>ಗಣರಾಜ್ಯೋತ್ಸವದ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಿಪಬ್ಲಿಕ್ ರೈಮ್ಸ್, ರಿಪಬ್ಲಿಕ್ ರನ್, ಸೇನೆಯ ಸಿಬ್ಬಂದಿಯನ್ನು ಗೌರವಿಸುವ ಮೂಲಕ ವಿಶಿಷ್ಟವಾಗಿ ಗಣರಾಜೋತ್ಸವ ಆಚರಿಸಲಾಗಿದೆ. ಮಹಿಳೆಯರ ಉದ್ಯಮಶೀಲತೆಗೂ ಒತ್ತು ನೀಡಲಾಗಿದೆ ಎಂದರು.</p>.<p>ಶೌರ್ಯ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೆ.ಬಿ.ಸಿಂಗ್ ಧ್ವಜಾರೋಹಣ ನೆರವೇರಿಸಿದರು. ರಿಪಬ್ಲಿಕ್ ರನ್ ಕಾರ್ಯಕ್ರಮದಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಗಣರಾಜ್ಯೋತ್ಸವ ಗೀತೆಗಳ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.</p>.<p>ಮಹಿಳಾ ಉದ್ಯಮಿಗಳಿಂದ ವಸ್ತುಪ್ರದರ್ಶನ ಮತ್ತು ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿತ್ತು. ಕರಕುಶಲ ವಸ್ತುಗಳು, ಸೀರೆಗಳು, ಬೇಕರಿ ಉತ್ಪನ್ನಗಳು, ಸೌಂದರ್ಯ ವರ್ಧಕಗಳು ಸೇರಿದಂತೆ ವಿವಿಧ ವಸ್ತುಗಳ ಮಾರಾಟ ಭರ್ಜರಿಯಾಗಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಏಕತೆ, ಸೇವಾ ಮನೋಭಾವ ಮತ್ತು ಸಾಮೂಹಿಕ ಜವಾಬ್ದಾರಿಯು ರಾಷ್ಟ್ರೀಯತೆಯ ಹೆಗ್ಗುರುತು ಎಂಬುದನ್ನು ಗಣರಾಜ್ಯೋತ್ಸವ ನೆನಪಿಸುತ್ತದೆ’ ಎಂದು ಫಿನಿಕ್ಸ್ ಮಾಲ್ ಆಫ್ ಏಷ್ಯಾದ ಮಾರುಕಟ್ಟೆ ನಿರ್ದೇಶಕ (ದಕ್ಷಿಣ) ರಿತು ಮೆಹ್ತಾ ಅಭಿಪ್ರಾಯಪಟ್ಟರು.</p>.<p>ಗಣರಾಜ್ಯೋತ್ಸವದ ಅಂಗವಾಗಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಿಪಬ್ಲಿಕ್ ರೈಮ್ಸ್, ರಿಪಬ್ಲಿಕ್ ರನ್, ಸೇನೆಯ ಸಿಬ್ಬಂದಿಯನ್ನು ಗೌರವಿಸುವ ಮೂಲಕ ವಿಶಿಷ್ಟವಾಗಿ ಗಣರಾಜೋತ್ಸವ ಆಚರಿಸಲಾಗಿದೆ. ಮಹಿಳೆಯರ ಉದ್ಯಮಶೀಲತೆಗೂ ಒತ್ತು ನೀಡಲಾಗಿದೆ ಎಂದರು.</p>.<p>ಶೌರ್ಯ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೆ.ಬಿ.ಸಿಂಗ್ ಧ್ವಜಾರೋಹಣ ನೆರವೇರಿಸಿದರು. ರಿಪಬ್ಲಿಕ್ ರನ್ ಕಾರ್ಯಕ್ರಮದಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಗಣರಾಜ್ಯೋತ್ಸವ ಗೀತೆಗಳ ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.</p>.<p>ಮಹಿಳಾ ಉದ್ಯಮಿಗಳಿಂದ ವಸ್ತುಪ್ರದರ್ಶನ ಮತ್ತು ಮಾರಾಟಕ್ಕೂ ಅವಕಾಶ ಕಲ್ಪಿಸಲಾಗಿತ್ತು. ಕರಕುಶಲ ವಸ್ತುಗಳು, ಸೀರೆಗಳು, ಬೇಕರಿ ಉತ್ಪನ್ನಗಳು, ಸೌಂದರ್ಯ ವರ್ಧಕಗಳು ಸೇರಿದಂತೆ ವಿವಿಧ ವಸ್ತುಗಳ ಮಾರಾಟ ಭರ್ಜರಿಯಾಗಿ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>