<p><strong>ಬೆಂಗಳೂರು:</strong> ‘ಬಜೆಟ್ನಲ್ಲಿ ಶೋಷಿತ ಸಮುದಾಯಗಳನ್ನು ವಂಚಿಸಿ ಸಮೃದ್ಧ ಕರ್ನಾಟಕ ನಿರ್ಮಾಣ ಹೇಗೆ ಸಾಧ್ಯ’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಪ್ರಶ್ನಿಸಿದರು.</p>.<p>‘ರಾಜ್ಯ ಬಜೆಟ್ ಜನಪರವೋ? ಜಾತಿಪರವೊ?’ ಎಂಬ ವಿಷಯದ ಕುರಿತು ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಈ ಬಾರಿಯ ಬಜೆಟ್ ಅಹಿಂದ ವರ್ಗಗಳ ವಿರೋಧಿ ಬಜೆಟ್ ಆಗಿದೆ. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ನಿಗಮಗಳಿಗೆ ತಲಾ ₹500 ಕೋಟಿ ನೀಡಿದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ 16 ನಿಗಮಗಳಿಗೆ ₹500 ಕೋಟಿ ಅನುದಾನ ನೀಡಲಾಗಿದೆ. ಇದರಿಂದ ದಲಿತ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಂಬೇಡ್ಕರ್ ಹಾಗೂ ಬುದ್ಧ ಅಧ್ಯಯನ ಕೇಂದ್ರಕ್ಕೆ 70 ವರ್ಷಗಳಿಂದ ಯಾವುದೇ ಸರ್ಕಾರಗಳು ಅನುದಾನ ನೀಡಿಲ್ಲ. ಈ ಬಾರಿ ಅನುದಾನ ನೀಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸೂಲಗಿತ್ತಿ ನರಸಮ್ಮ ಸ್ಮಾರಕ ನಿರ್ಮಾಣಕ್ಕೆ ₹5 ಕೋಟಿ ಅನುದಾನ ಕೇಳಲಾಗಿತ್ತು. ಅದನ್ನೂ ನೀಡಿಲ್ಲ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ರಚಿಸಬೇಕು ಎಂಬ ಬೇಡಿಕೆ ಈಡೇರಿಲ್ಲ. ನೆಪಮಾತ್ರಕ್ಕೆ ಇದು ಸಮೃದ್ಧ ಕರ್ನಾಟಕ ಬಜೆಟ್’ ಎಂದರು.</p>.<p>‘ತಳ ಸಮುದಾಯಗಳ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ನಿವೃತ್ತ ಐಎಎಸ್ ಅಧಿಕಾರಿ ಡಾ.ರಾಜು, ಚಿಂತಕ ಲೋಲಾಕ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಜೆಟ್ನಲ್ಲಿ ಶೋಷಿತ ಸಮುದಾಯಗಳನ್ನು ವಂಚಿಸಿ ಸಮೃದ್ಧ ಕರ್ನಾಟಕ ನಿರ್ಮಾಣ ಹೇಗೆ ಸಾಧ್ಯ’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಪ್ರಶ್ನಿಸಿದರು.</p>.<p>‘ರಾಜ್ಯ ಬಜೆಟ್ ಜನಪರವೋ? ಜಾತಿಪರವೊ?’ ಎಂಬ ವಿಷಯದ ಕುರಿತು ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಈ ಬಾರಿಯ ಬಜೆಟ್ ಅಹಿಂದ ವರ್ಗಗಳ ವಿರೋಧಿ ಬಜೆಟ್ ಆಗಿದೆ. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ನಿಗಮಗಳಿಗೆ ತಲಾ ₹500 ಕೋಟಿ ನೀಡಿದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ 16 ನಿಗಮಗಳಿಗೆ ₹500 ಕೋಟಿ ಅನುದಾನ ನೀಡಲಾಗಿದೆ. ಇದರಿಂದ ದಲಿತ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಂಬೇಡ್ಕರ್ ಹಾಗೂ ಬುದ್ಧ ಅಧ್ಯಯನ ಕೇಂದ್ರಕ್ಕೆ 70 ವರ್ಷಗಳಿಂದ ಯಾವುದೇ ಸರ್ಕಾರಗಳು ಅನುದಾನ ನೀಡಿಲ್ಲ. ಈ ಬಾರಿ ಅನುದಾನ ನೀಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಸೂಲಗಿತ್ತಿ ನರಸಮ್ಮ ಸ್ಮಾರಕ ನಿರ್ಮಾಣಕ್ಕೆ ₹5 ಕೋಟಿ ಅನುದಾನ ಕೇಳಲಾಗಿತ್ತು. ಅದನ್ನೂ ನೀಡಿಲ್ಲ. ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ರಚಿಸಬೇಕು ಎಂಬ ಬೇಡಿಕೆ ಈಡೇರಿಲ್ಲ. ನೆಪಮಾತ್ರಕ್ಕೆ ಇದು ಸಮೃದ್ಧ ಕರ್ನಾಟಕ ಬಜೆಟ್’ ಎಂದರು.</p>.<p>‘ತಳ ಸಮುದಾಯಗಳ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ನಿವೃತ್ತ ಐಎಎಸ್ ಅಧಿಕಾರಿ ಡಾ.ರಾಜು, ಚಿಂತಕ ಲೋಲಾಕ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>