‘ರಾಜ್ಯ ಸಚಿವ ಸಂಪುಟ ನಿರ್ಣಯದಂತೆ 1,873 ಕೊಳೆಗೇರಿಯ 3.12 ಲಕ್ಷ ಕುಟುಂಬಗಳಿಗೆ 6 ತಿಂಗಳಲ್ಲಿ ಹಕ್ಕುಪತ್ರ ನೀಡಿ, ಭೂ ಒಡೆತನ
ನೀಡಬೇಕು. ಕೊಳಚೆ ಪ್ರದೇಶದ ವಾಸಿಗಳು ವಾಣಿಜ್ಯ ಬ್ಯಾಂಕ್ಗಳಿಂದ ಸಾಲ ಪಡೆದು, ಸರ್ಕಾರಗಳ ಅನುದಾನ ಬಳಸಿಕೊಂಡು ಸ್ವತಃ ಮನೆ ನಿರ್ಮಿಸಿಕೊಳ್ಳಲು ಅಗತ್ಯವಿರುವ ಬೆಂಬಲವನ್ನು ರಾಜ್ಯ ಸರ್ಕಾರದಿಂದ ದೊರಕಿಸಿಕೊಡಬೇಕು’ ಎಂದು ಸಂಘಟನೆಯ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಕೋರಿದರು.