<p><strong>ಬೆಂಗಳೂರು: </strong>ರಾಜ್ಯದ ಕೊಳೆಗೇರಿ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಹಣ ಮೀಸಲಿಡಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ನಿಯೋಗವು ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಗುರುವಾರ ಮನವಿ ಸಲ್ಲಿಸಿತು.</p>.<p>‘ರಾಜ್ಯ ಸಚಿವ ಸಂಪುಟ ನಿರ್ಣಯದಂತೆ 1,873 ಕೊಳೆಗೇರಿಯ 3.12 ಲಕ್ಷ ಕುಟುಂಬಗಳಿಗೆ 6 ತಿಂಗಳಲ್ಲಿ ಹಕ್ಕುಪತ್ರ ನೀಡಿ, ಭೂ ಒಡೆತನ<br />ನೀಡಬೇಕು. ಕೊಳಚೆ ಪ್ರದೇಶದ ವಾಸಿಗಳು ವಾಣಿಜ್ಯ ಬ್ಯಾಂಕ್ಗಳಿಂದ ಸಾಲ ಪಡೆದು, ಸರ್ಕಾರಗಳ ಅನುದಾನ ಬಳಸಿಕೊಂಡು ಸ್ವತಃ ಮನೆ ನಿರ್ಮಿಸಿಕೊಳ್ಳಲು ಅಗತ್ಯವಿರುವ ಬೆಂಬಲವನ್ನು ರಾಜ್ಯ ಸರ್ಕಾರದಿಂದ ದೊರಕಿಸಿಕೊಡಬೇಕು’ ಎಂದು ಸಂಘಟನೆಯ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಕೋರಿದರು.</p>.<p>‘ಕೊಳೆಗೇರಿಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು, ಫಲಾನುಭವಿ ಶುಲ್ಕ ಪಾವತಿಗಾಗಿ ₹500 ಕೋಟಿ, ಖಾಸಗಿ ಒಡೆತನದ ಕೊಳಚೆ<br />ಪ್ರದೇಶಗಳ ಭೂ ಸ್ವಾಧೀನಕ್ಕೆ ₹500 ಕೋಟಿ ಸೇರಿದಂತೆ ಒಟ್ಟು ₹1000 ಕೋಟಿ ಮೀಸಲಿಡಬೇಕು’ ಎಂದು ಅವರು ಮನವಿ ಮಾಡಿದರು.</p>.<p>‘ರಾಜ್ಯದ ಕೊಳೆಗೇರಿ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಹಕ್ಕುಪತ್ರ ನೀಡಲು 6 ತಿಂಗಳ ಗಡುವನ್ನು ಹಾಕಿಕೊಂಡಿದ್ದು ಅಗತ್ಯವಿರುವ ಹಣಕಾಸನ್ನು ಸಹ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ಸಚಿವ ವಿ. ಸೋಮಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಕೊಳೆಗೇರಿ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಹಣ ಮೀಸಲಿಡಬೇಕು ಎಂದು ಸ್ಲಂ ಜನಾಂದೋಲನ ಕರ್ನಾಟಕ ನಿಯೋಗವು ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಗುರುವಾರ ಮನವಿ ಸಲ್ಲಿಸಿತು.</p>.<p>‘ರಾಜ್ಯ ಸಚಿವ ಸಂಪುಟ ನಿರ್ಣಯದಂತೆ 1,873 ಕೊಳೆಗೇರಿಯ 3.12 ಲಕ್ಷ ಕುಟುಂಬಗಳಿಗೆ 6 ತಿಂಗಳಲ್ಲಿ ಹಕ್ಕುಪತ್ರ ನೀಡಿ, ಭೂ ಒಡೆತನ<br />ನೀಡಬೇಕು. ಕೊಳಚೆ ಪ್ರದೇಶದ ವಾಸಿಗಳು ವಾಣಿಜ್ಯ ಬ್ಯಾಂಕ್ಗಳಿಂದ ಸಾಲ ಪಡೆದು, ಸರ್ಕಾರಗಳ ಅನುದಾನ ಬಳಸಿಕೊಂಡು ಸ್ವತಃ ಮನೆ ನಿರ್ಮಿಸಿಕೊಳ್ಳಲು ಅಗತ್ಯವಿರುವ ಬೆಂಬಲವನ್ನು ರಾಜ್ಯ ಸರ್ಕಾರದಿಂದ ದೊರಕಿಸಿಕೊಡಬೇಕು’ ಎಂದು ಸಂಘಟನೆಯ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಕೋರಿದರು.</p>.<p>‘ಕೊಳೆಗೇರಿಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು, ಫಲಾನುಭವಿ ಶುಲ್ಕ ಪಾವತಿಗಾಗಿ ₹500 ಕೋಟಿ, ಖಾಸಗಿ ಒಡೆತನದ ಕೊಳಚೆ<br />ಪ್ರದೇಶಗಳ ಭೂ ಸ್ವಾಧೀನಕ್ಕೆ ₹500 ಕೋಟಿ ಸೇರಿದಂತೆ ಒಟ್ಟು ₹1000 ಕೋಟಿ ಮೀಸಲಿಡಬೇಕು’ ಎಂದು ಅವರು ಮನವಿ ಮಾಡಿದರು.</p>.<p>‘ರಾಜ್ಯದ ಕೊಳೆಗೇರಿ ಜನರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಹಕ್ಕುಪತ್ರ ನೀಡಲು 6 ತಿಂಗಳ ಗಡುವನ್ನು ಹಾಕಿಕೊಂಡಿದ್ದು ಅಗತ್ಯವಿರುವ ಹಣಕಾಸನ್ನು ಸಹ ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ಸಚಿವ ವಿ. ಸೋಮಣ್ಣ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>