ಅವೆನ್ಯೂ ರಸ್ತೆಯ ನಿವಾಸಿಯೊಬ್ಬರಿಗೆ ಸೋಂಕು ದೃಢಪಟ್ಟಿರುವುದನ್ನು ಗುರುವಾರ ರಾತ್ರಿ ಕರೆ ಮಾಡಿ ತಿಳಿಸಿದ ಬಿಬಿಎಂಪಿ ಸಿಬ್ಬಂದಿ,ಬೆಳಿಗ್ಗೆಯಾದರೂ ಕರೆದೊಯ್ಯಲು ಬರಲಿಲ್ಲ. ತಮ್ಮ ವಾಹನದಲ್ಲಿಯೇ ಶುಕ್ರವಾರ ಕೆ.ಸಿ.ಜನರಲ್ ಆಸ್ಪತ್ರೆಗೆ ಹೋದರು.ದಾಖಲಿಸಿಕೊಳ್ಳಲು ಅಲ್ಲಿನ ಸಿಬ್ಬಂದಿ ನಿರಾಕರಿಸಿದರು. ಕೆಲವು ಸಮಯ ಅವರು ಆಸ್ಪತ್ರೆಯ ಬಳಿ ಕುಳಿತು ಸಿಬ್ಬಂದಿ ಬಳಿ ಅಂಗಲಾಚಿಸಿದರು. ಬಳಿಕ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಯಿತು.