ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲು ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಸರ್ಕಾರಗಳು ಕ್ರಮ ಕೈಗೊಂಡಿವೆ. ಕರ್ನಾಟಕ ಸರ್ಕಾರವೂ ಇದೇ ನೀತಿ ಅನುಸರಿಸಬೇಕು. ಆಯಾ ಶಾಲೆಗಳಲ್ಲಿ ಸೇವಾ ದೃಢೀಕರಣ ಪತ್ರವನ್ನು ನೀಡಬೇಕು. ಆಕಸ್ಮಿಕ ಅವಘಡಗಳಿಂದ ಜೀವಕ್ಕೆ ತೊಂದರೆಯಾದಾಗ ಅವರ ಕುಟುಂಬಕ್ಕೆ ಪರಿಹಾರ ಧನ ನೀಡಬೇಕು. ಇಲ್ಲವೇ ಜೀವವಿಮಾ ಯೋಜನೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.