ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಿಕಾ ವಿತರಕರಿಗೆ ₹5 ಕೋಟಿ ಮೀಸಲಿಡಲು ಮನವಿ

Published 27 ಜನವರಿ 2024, 15:47 IST
Last Updated 27 ಜನವರಿ 2024, 15:47 IST
ಅಕ್ಷರ ಗಾತ್ರ

ಬೆಂಗಳೂರು: ಪತ್ರಿಕಾ ವಿತರಕರ ಶ್ರೇಯೋಭಿವೃದ್ಧಿಗೆ ರಾಜ್ಯದ ಮುಂದಿನ ಬಜೆಟ್‌ನಲ್ಲಿ ₹5 ಕೋಟಿ ಮೀಸಲಿಡುವಂತೆ ಕೋರಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರಿಗೆ ರಾಜ್ಯ ಪತ್ರಿಕಾ ವಿತರಕರು ಶನಿವಾರ ಮನವಿ ಸಲ್ಲಿಸಿದರು. ಒಕ್ಕೂಟದ ರಾಜ್ಯ ಅಧ್ಯಕ್ಷ ಕೆ.ಶಂಭುಲಿಂಗ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಪತ್ರಿಕಾ ವಿತರಣೆ ಕೆಲಸದಲ್ಲಿ 60 ವರ್ಷ ಮೇಲ್ಪಟ್ಟ ಅನೇಕ ಮಂದಿ ಕೆಲಸ ಮಾಡುತ್ತಿದ್ದಾರೆ. ‘ಇ–ಶ್ರಮ್‌’ ಯೋಜನೆಯಲ್ಲಿ ವಿತರಕರ ವಯೋಮಿತಿಯನ್ನು 59 ವರ್ಷದಿಂದ 75 ವರ್ಷಕ್ಕೆ ಏರಿಸಬೇಕು. ವಿತರಕರಿಗಾಗಿ ಸಮುದಾಯ ಭವನ ನಿರ್ಮಿಸಲು ಜಾಗ, ವಿತರಕರಿಗೆ ನಿವೇಶನ, ಎಲೆಕ್ಟ್ರಿಕ್ ಬೈಕ್‌ ಉಚಿತವಾಗಿ ನೀಡಬೇಕು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT