ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

Last Updated 19 ನವೆಂಬರ್ 2019, 2:30 IST
ಅಕ್ಷರ ಗಾತ್ರ

ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಸಂಶೋಧನಾ ವಿದ್ಯಾರ್ಥಿ ಮರಣ ಪತ್ರ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಗೆಹಳ್ಳಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕೊಡಿಗೆಹಳ್ಳಿಯ ಮಾರುತಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ, ಉತ್ತರ ಪ್ರದೇಶದ ಪ್ರಸನ್ನ ತ್ರಿಪಾಠಿ (25) ನೇಣುಹಾಕಿಕೊಂಡು ಸಾವಿಗೆ ಶರಣಾದ ವಿದ್ಯಾರ್ಥಿ.

ಕಾಲೇಜಿಗೆ ಭಾನುವಾರ ರಜೆ ಇದ್ದುದರಿಂದ ತ್ರಿಪಾಠಿ, ತಮ್ಮ ಮನೆಯಲ್ಲಿ ಒಬ್ಬರೇ ಇದ್ದರು. ರಾತ್ರಿ 11 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತ್ರಿಪಾಠಿ ಜೊತೆಗೆ ವಾಸವಿದ್ದ ತಮಿಳುನಾಡಿನ ವಿದ್ಯಾರ್ಥಿಯೊಬ್ಬರು ಮೂರು ದಿನಗಳ ಹಿಂದೆಯಷ್ಟೇ ಊರಿಗೆ ಹೋಗಿದ್ದರು. ಕೆಲವು ದಿನಗಳ ಹಿಂದೆ ಅವರಿಬ್ಬರ ಮಧ್ಯೆ ಜಗಳ ನಡೆದಿತ್ತು. ಇದರಿಂದ ತ್ರಿಪಾಠಿ ತೀವ್ರವಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ. ಆದರೆ, ಮರಣಪತ್ರದಲ್ಲಿ, ‘ನನ್ನ ಸಾವಿಗೆ ಯಾರು ಕಾರಣರಲ್ಲ’ ಎಂದು ತ್ರಿಪಾಠಿ ಉಲ್ಲೇಖಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT