‘2ಎ’ಗೆ ಪಂಚಮಸಾಲಿ ಸೇರ್ಪಡೆ ಸಾಧ್ಯತೆ
ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ ‘2–ಎ’ ಪಟ್ಟಿಗೆ ಸೇರಿಸುವ ಪ್ರಮುಖ ನಿರ್ಣಯವನ್ನು ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆ ಕೈಗೊಳ್ಳುವ ಸಾಧ್ಯತೆ ಇದೆ.
ಸಚಿವ ಸಂಪುಟದ ಕಾರ್ಯಸೂಚಿಯಲ್ಲಿ ಈ ಪ್ರಸ್ತಾವವನ್ನು ಸೇರಿಸಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ, ಈ ಬಗ್ಗೆ ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.