‘ಮುಸ್ಲಿಮರಿಗಿದ್ದ 2 ‘ಬಿ’ ಮೀಸಲಾತಿಯನ್ನು ಯಾರೂ ಪ್ರಶ್ನಿಸಿರಲಿಲ್ಲ. ರದ್ದು ಪಡಿಸಬೇಕೆಂಬ ನ್ಯಾಯಾಲಯದ ಆದೇ
ಶವೂ ಇಲ್ಲ. ಆದರೂ, ಸರ್ಕಾರ ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮೀಸಲಾತಿ ರದ್ದುಪಡಿಸುವ ನಿರ್ಣಯ ಕೈಗೊಂಡಿದೆ. ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರನಡೆಸಿರುವುದು ಕಂಡುಬರುತ್ತಿದೆ. ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.