<p><strong>ಬೆಂಗಳೂರು: </strong>ಮುಸ್ಲಿಮರಿಗೆ ಪ್ರವರ್ಗ 2 ‘ಬಿ’ ನೀಡಿದ್ದ ಮೀಸಲಾತಿ ರದ್ದು ಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್ ಷರೀಫ್ ಖಂಡಿಸಿದ್ದಾರೆ.</p>.<p>‘ಮುಸ್ಲಿಮರಿಗಿದ್ದ 2 ‘ಬಿ’ ಮೀಸಲಾತಿಯನ್ನು ಯಾರೂ ಪ್ರಶ್ನಿಸಿರಲಿಲ್ಲ. ರದ್ದು ಪಡಿಸಬೇಕೆಂಬ ನ್ಯಾಯಾಲಯದ ಆದೇ<br />ಶವೂ ಇಲ್ಲ. ಆದರೂ, ಸರ್ಕಾರ ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮೀಸಲಾತಿ ರದ್ದುಪಡಿಸುವ ನಿರ್ಣಯ ಕೈಗೊಂಡಿದೆ. ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರನಡೆಸಿರುವುದು ಕಂಡುಬರುತ್ತಿದೆ. ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಕುರಿತು ರಾಜ್ಯಪಾಲರಿಗೂ ದೂರು ನೀಡಿ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಆಗ್ರಹಿಸಲು ನಿರ್ಧರಿಸಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಸ್ಲಿಮರಿಗೆ ಪ್ರವರ್ಗ 2 ‘ಬಿ’ ನೀಡಿದ್ದ ಮೀಸಲಾತಿ ರದ್ದು ಪಡಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್ ಷರೀಫ್ ಖಂಡಿಸಿದ್ದಾರೆ.</p>.<p>‘ಮುಸ್ಲಿಮರಿಗಿದ್ದ 2 ‘ಬಿ’ ಮೀಸಲಾತಿಯನ್ನು ಯಾರೂ ಪ್ರಶ್ನಿಸಿರಲಿಲ್ಲ. ರದ್ದು ಪಡಿಸಬೇಕೆಂಬ ನ್ಯಾಯಾಲಯದ ಆದೇ<br />ಶವೂ ಇಲ್ಲ. ಆದರೂ, ಸರ್ಕಾರ ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮೀಸಲಾತಿ ರದ್ದುಪಡಿಸುವ ನಿರ್ಣಯ ಕೈಗೊಂಡಿದೆ. ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರನಡೆಸಿರುವುದು ಕಂಡುಬರುತ್ತಿದೆ. ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಕುರಿತು ರಾಜ್ಯಪಾಲರಿಗೂ ದೂರು ನೀಡಿ, ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಆಗ್ರಹಿಸಲು ನಿರ್ಧರಿಸಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>