ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳ ಮೀಸಲಾತಿ: ಇಂದು ಮಾದಿಗ ಮುಖಂಡರ ಸಭೆ

Last Updated 10 ಸೆಪ್ಟೆಂಬರ್ 2020, 1:19 IST
ಅಕ್ಷರ ಗಾತ್ರ

ಬೆಂಗಳೂರು: ಒಳ ಮೀಸಲಾತಿ ಹಾಗೂ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನದ ಕುರಿತು ಚರ್ಚಿಸಲು ಸಂಸದ ಎ.ನಾರಾಯಣಸ್ವಾಮಿ ಹಾಗೂ ಮಾಜಿ ಸಚಿವ ಎಚ್‌.ಆಂಜನೇಯ ನೇತೃತ್ವದಲ್ಲಿ ಎಲ್ಲ ಪಕ್ಷಗಳ ಮಾದಿಗ ಸಮುದಾಯದ (ಎಡಗೈ) ಮುಖಂಡರ ಸಭೆ ಗುರುವಾರ ನಡೆಯಲಿದೆ.

ಶಾಸಕರ ಭವನದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಮಾದಿಗ ಸಮುದಾಯದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳ ಹಾಲಿ ಹಾಗೂ ಮಾಜಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ನಾರಾಯಣಸ್ವಾಮಿ, ಆಂಜನೇಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT