ಪಂಚಮಸಾಲಿ ಮೀಸಲಾತಿ: ದಾಖಲೆ ನೀಡುವಂತೆ ಸ್ವಾಮೀಜಿಗಳಿಗೆ ಪತ್ರ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ 2 ಎ ಸೇರ್ಪಡೆ ಮಾಡುವ ಕುರಿತು ಬಸವ ಜಯ ಮೃತ್ಯುಂಜಯ ಸಾಮೀಜಿ ಮತ್ತು ವಚನಾನಂದ ಸ್ವಾಮೀಜಿಯವರಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ.
ಈ ಕ್ರಮವನ್ನು ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ ಅವರು ಸ್ವಾಗತಿಸಿದ್ದಾರೆ. 2ಎಗೆ ಸೇರಿಸುವ ಸಂಬಂಧ ಸಾಕ್ಷಾಧ್ಯಾರಗಳಿದ್ದರೆ ಖುದ್ದಾಗಿ ಅಥವಾ ಸಂಬಂಧಪಟ್ಟವರ ಮೂಲಕ ಮಾರ್ಚ್ 22 ರಂದು ಆಯೋಗಕ್ಕೆ ನೀಡುವಂತೆ ಸೂಚಿಸಿರುವುದು ಸಕಾರಾತ್ಮಕ ಬೆಳವಣಿಗೆ ಎಂದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.