<p><strong>ಬೆಂಗಳೂರು</strong>: ರಾಜ್ಯದಲ್ಲಿ ಇರುವ ಜೇನು ಕುರುಬ, ಕೊರಗ, ಇರುಳಿಗ, ಸೋಲಿಗ ಸೇರಿದಂತೆ ನೈಜ ಬುಡಕಟ್ಟು ನಿವಾಸಿಗಳನ್ನು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಪಟ್ಟಿಯಿಂದ ಕೈಬಿಟ್ಟು, ‘ಆದಿವಾಸಿಗಳು’ ಎಂದು ಘೋಷಿಸುವಂತೆ ಈ ಸಮುದಾಯಗಳ ಸಂಘಟನೆಗಳ ಪ್ರಮುಖರ ಸಭೆ ರಾಜ್ಯ ಸರ್ಕಾರವನ್ನು ಆಗ್ರಹಪಡಿಸಿದೆ. </p>.<p>ನಗರದ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಆಯೋಜಿಸಿದ್ದ ಈ ಸಭೆಯಲ್ಲಿ ರಾಜ್ಯದ 12 ಅರಣ್ಯ ಆಧಾರಿತ ಮೂಲ ಆದಿವಾಸಿ ಬುಡಕಟ್ಟುಗಳ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ರಾಷ್ಟ್ರೀಯ ಕಾನೂನು ಶಾಲೆಯ ಸಾಮಾಜಿಕ ಒಳಗೊಳ್ಳುವಿಕೆ ಕೇಂದ್ರದ ಆರ್.ವಿ. ಚಂದ್ರಶೇಖರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ವ್ಯಾಪ್ತಿಯಿಂದಲೂ ಮೂಲ ಆದಿವಾಸಿಗಳನ್ನು ಕೈಬಿಟ್ಟು, ಹಿಂದೆ ಇದ್ದ ಆದಿವಾಸಿ ಅಭಿವೃದ್ಧಿ ಮಂಡಳಿಯನ್ನು ಪುನರ್ ರಚಿಸಬೇಕು. ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ನಿಗಮದ ಸ್ಥಾಪನೆ ಘೋಷಿಸಬೇಕು ಮತ್ತು ಆದಿವಾಸಿಗಳಿಗೆ ಮೂಲಸೌಕರ್ಯ ಒದಗಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು’ ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.</p>.<p>‘ಈಗ ಇರುವ ಮೂಲ ಆದಿವಾಸಿಗಳ ಅಧ್ಯಯನ ಕೇಂದ್ರವನ್ನು ಕರ್ನಾಟಕ ಆದಿವಾಸಿಗಳ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯಾಗಿ ಘೋಷಿಸಿ, ಬಜೆಟ್ನಲ್ಲಿ ₹5 ಕೋಟಿ ಅನುದಾನ ನೀಡಬೇಕು. ನಿಗಮ ಹಾಗೂ ಅಧ್ಯಯನ ಮತ್ತು ತರಬೇತಿ ಸಂಸ್ಥೆಗೆ ಮೂಲ ಆದಿವಾಸಿ ಸಮುದಾಯಗಳ ಉನ್ನತ ಶಿಕ್ಷಣ ಪಡೆದವರನ್ನು, ಅನುಭವಿ ಅಧಿಕಾರಿಗಳನ್ನು ಅಧ್ಯಕ್ಷರಾಗಿ ನೇಮಿಸಬೇಕು. ಮೂಲ ಆದಿವಾಸಿಗಳಿಗೆ ಪ್ರಾತಿನಿಧ್ಯ ನೀಡಬೇಕು’ ಎಂದು ಆಗ್ರಹಿಸಲಾಗಿದೆ.</p>.<p>ಆದಿವಾಸಿ ಬುಡಕಟ್ಟು ಮಕ್ಕಳಿಗಾಗಿ ನಿರ್ಮಿಸಿರುವ ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ರಕ್ಷಣೆಯ ಕೊರತೆಯಿದ್ದು, ಈ ಸಂಬಂಧ ಶಾಲೆಗಳಲ್ಲಿರುವ ಮೂಲಸೌಲಭ್ಯಗಳನ್ನು ಕುರಿತು ಅಧ್ಯಯನ ಮಾಡಲು ಸಮಿತಿ ರಚಿಸಬೇಕು ಎಂದು ಸಭೆ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಇರುವ ಜೇನು ಕುರುಬ, ಕೊರಗ, ಇರುಳಿಗ, ಸೋಲಿಗ ಸೇರಿದಂತೆ ನೈಜ ಬುಡಕಟ್ಟು ನಿವಾಸಿಗಳನ್ನು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಪಟ್ಟಿಯಿಂದ ಕೈಬಿಟ್ಟು, ‘ಆದಿವಾಸಿಗಳು’ ಎಂದು ಘೋಷಿಸುವಂತೆ ಈ ಸಮುದಾಯಗಳ ಸಂಘಟನೆಗಳ ಪ್ರಮುಖರ ಸಭೆ ರಾಜ್ಯ ಸರ್ಕಾರವನ್ನು ಆಗ್ರಹಪಡಿಸಿದೆ. </p>.<p>ನಗರದ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಆಯೋಜಿಸಿದ್ದ ಈ ಸಭೆಯಲ್ಲಿ ರಾಜ್ಯದ 12 ಅರಣ್ಯ ಆಧಾರಿತ ಮೂಲ ಆದಿವಾಸಿ ಬುಡಕಟ್ಟುಗಳ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು. ರಾಷ್ಟ್ರೀಯ ಕಾನೂನು ಶಾಲೆಯ ಸಾಮಾಜಿಕ ಒಳಗೊಳ್ಳುವಿಕೆ ಕೇಂದ್ರದ ಆರ್.ವಿ. ಚಂದ್ರಶೇಖರ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ವ್ಯಾಪ್ತಿಯಿಂದಲೂ ಮೂಲ ಆದಿವಾಸಿಗಳನ್ನು ಕೈಬಿಟ್ಟು, ಹಿಂದೆ ಇದ್ದ ಆದಿವಾಸಿ ಅಭಿವೃದ್ಧಿ ಮಂಡಳಿಯನ್ನು ಪುನರ್ ರಚಿಸಬೇಕು. ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ನಿಗಮದ ಸ್ಥಾಪನೆ ಘೋಷಿಸಬೇಕು ಮತ್ತು ಆದಿವಾಸಿಗಳಿಗೆ ಮೂಲಸೌಕರ್ಯ ಒದಗಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು’ ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.</p>.<p>‘ಈಗ ಇರುವ ಮೂಲ ಆದಿವಾಸಿಗಳ ಅಧ್ಯಯನ ಕೇಂದ್ರವನ್ನು ಕರ್ನಾಟಕ ಆದಿವಾಸಿಗಳ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯಾಗಿ ಘೋಷಿಸಿ, ಬಜೆಟ್ನಲ್ಲಿ ₹5 ಕೋಟಿ ಅನುದಾನ ನೀಡಬೇಕು. ನಿಗಮ ಹಾಗೂ ಅಧ್ಯಯನ ಮತ್ತು ತರಬೇತಿ ಸಂಸ್ಥೆಗೆ ಮೂಲ ಆದಿವಾಸಿ ಸಮುದಾಯಗಳ ಉನ್ನತ ಶಿಕ್ಷಣ ಪಡೆದವರನ್ನು, ಅನುಭವಿ ಅಧಿಕಾರಿಗಳನ್ನು ಅಧ್ಯಕ್ಷರಾಗಿ ನೇಮಿಸಬೇಕು. ಮೂಲ ಆದಿವಾಸಿಗಳಿಗೆ ಪ್ರಾತಿನಿಧ್ಯ ನೀಡಬೇಕು’ ಎಂದು ಆಗ್ರಹಿಸಲಾಗಿದೆ.</p>.<p>ಆದಿವಾಸಿ ಬುಡಕಟ್ಟು ಮಕ್ಕಳಿಗಾಗಿ ನಿರ್ಮಿಸಿರುವ ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ರಕ್ಷಣೆಯ ಕೊರತೆಯಿದ್ದು, ಈ ಸಂಬಂಧ ಶಾಲೆಗಳಲ್ಲಿರುವ ಮೂಲಸೌಲಭ್ಯಗಳನ್ನು ಕುರಿತು ಅಧ್ಯಯನ ಮಾಡಲು ಸಮಿತಿ ರಚಿಸಬೇಕು ಎಂದು ಸಭೆ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>