<p><strong>ಬೆಂಗಳೂರು</strong>: ನಾಡಗೀತೆಯ ರಾಗದ ತಕರಾರಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ವೇಳೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ವಿಭಿನ್ನ ರಾಗದಲ್ಲಿ ಕುವೆಂಪು ವಿರಚಿತ ನಾಡಗೀತೆಯನ್ನು ಹಾಡುವ ಮೂಲಕ ನ್ಯಾಯಪೀಠಕ್ಕೆ ರಾಗದ ಮಹತ್ವ ತಿಳಿಸಿದರು.</p>.<p>ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರವು 2022ರ ಸೆಪ್ಟೆಂಬರ್ 25ರಂದು ಹೊರಡಿಸಿದ ಆದೇಶವನ್ನು ಆಕ್ಷೇಪಿಸಿ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ರಾಗಗಳ ಭಿನ್ನತೆಯ ವಿವರಣೆ ಕೇಳಿದ್ದಲ್ಲದೇ, ಹಾಡುವಂತೆ ಸೂಚಿಸಿದರು.</p>.<p>ಕೋರ್ಟ್ ಹಾಲ್ನಲ್ಲಿಯೇ ಕೃಷ್ಣಮೂರ್ತಿಯವರು ತಮ್ಮ ವಾದಕ್ಕೆ ಪೂರಕವಾಗಿ ನಾಡಗೀತೆಯನ್ನು, ‘ಉದಯ ರವಿಚಂದ್ರಿಕೆ, ಜಂಜೂಟಿ, ಹಿಂದೋಳ, ಕಲ್ಯಾಣಿ ಮತ್ತು ಮಾಯಾ ಮಾಳವ ಗೌಳ’ ರಾಗಗಳಲ್ಲಿ ಹಾಡಿದರು.</p>.<p>ಸಿ.ಅಶ್ವತ್ಥ್ ಅವರು ಸಂಯೋಜಿಸಿರುವ ರಾಗದಲ್ಲೇ ನಾಡಗೀತೆ ಹಾಡುವುದು ಸಮಂಜಸ ಎಂದು ಪ್ರತಿಪಾದಿಸಿದರು.</p>.<p>ಕೃಷ್ಣಮೂರ್ತಿಯವರ ಪ್ರತಿಪಾದನೆಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ‘ಪ್ರಕರಣದಲ್ಲಿ ಅಡಗಿರುವ ವಿಚಾರ ಗಂಭೀರವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರಿ ವಕೀಲರು ಈ ಪ್ರಕರಣದ ವಿಚಾರಗಳನ್ನು ಆಳವಾಗಿ ಶೋಧಿಸಿ, ಸಮಗ್ರ ಮಾಹಿತಿ ಕಲೆ ಹಾಕಿ ನ್ಯಾಯಾಲಯಕ್ಕೆ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಾಡಗೀತೆಯ ರಾಗದ ತಕರಾರಿಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆ ವೇಳೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಅವರು ವಿಭಿನ್ನ ರಾಗದಲ್ಲಿ ಕುವೆಂಪು ವಿರಚಿತ ನಾಡಗೀತೆಯನ್ನು ಹಾಡುವ ಮೂಲಕ ನ್ಯಾಯಪೀಠಕ್ಕೆ ರಾಗದ ಮಹತ್ವ ತಿಳಿಸಿದರು.</p>.<p>ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್ಗಳಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಸರ್ಕಾರವು 2022ರ ಸೆಪ್ಟೆಂಬರ್ 25ರಂದು ಹೊರಡಿಸಿದ ಆದೇಶವನ್ನು ಆಕ್ಷೇಪಿಸಿ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ರಾಗಗಳ ಭಿನ್ನತೆಯ ವಿವರಣೆ ಕೇಳಿದ್ದಲ್ಲದೇ, ಹಾಡುವಂತೆ ಸೂಚಿಸಿದರು.</p>.<p>ಕೋರ್ಟ್ ಹಾಲ್ನಲ್ಲಿಯೇ ಕೃಷ್ಣಮೂರ್ತಿಯವರು ತಮ್ಮ ವಾದಕ್ಕೆ ಪೂರಕವಾಗಿ ನಾಡಗೀತೆಯನ್ನು, ‘ಉದಯ ರವಿಚಂದ್ರಿಕೆ, ಜಂಜೂಟಿ, ಹಿಂದೋಳ, ಕಲ್ಯಾಣಿ ಮತ್ತು ಮಾಯಾ ಮಾಳವ ಗೌಳ’ ರಾಗಗಳಲ್ಲಿ ಹಾಡಿದರು.</p>.<p>ಸಿ.ಅಶ್ವತ್ಥ್ ಅವರು ಸಂಯೋಜಿಸಿರುವ ರಾಗದಲ್ಲೇ ನಾಡಗೀತೆ ಹಾಡುವುದು ಸಮಂಜಸ ಎಂದು ಪ್ರತಿಪಾದಿಸಿದರು.</p>.<p>ಕೃಷ್ಣಮೂರ್ತಿಯವರ ಪ್ರತಿಪಾದನೆಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ‘ಪ್ರಕರಣದಲ್ಲಿ ಅಡಗಿರುವ ವಿಚಾರ ಗಂಭೀರವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರಿ ವಕೀಲರು ಈ ಪ್ರಕರಣದ ವಿಚಾರಗಳನ್ನು ಆಳವಾಗಿ ಶೋಧಿಸಿ, ಸಮಗ್ರ ಮಾಹಿತಿ ಕಲೆ ಹಾಕಿ ನ್ಯಾಯಾಲಯಕ್ಕೆ ನೀಡಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಇದೇ 31ಕ್ಕೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>