<p><strong>ಬೆಂಗಳೂರು</strong>: ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೊಹಳ್ಳಿ ವಾರ್ಡ್ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸರಿಪಡಿಸಿದೆ.</p>.<p>ಕೆಂಪೇಗೌಡ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಬಂದು ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡರು. ಬಳಿಕ ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಸಮಸ್ಯೆ ಪರಿಶೀಲಿಸಿ, ಕ್ರಮ ಕೈಗೊಂಡರು.</p>.<p><strong>ಅಂಬೇಡ್ಕರ್ ನಗರಕ್ಕೆ ನೀರು:</strong> ನಾಯಂಡಹಳ್ಳಿಯ ಪಂತರ್ಪಾಳ್ಯದ ಅಂಬೇಡ್ಕರ್ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉದ್ಭವವಾಗಿರುವುದನ್ನು ಅರಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರೊಂದಿಗೆ ಚರ್ಚಿಸಿದರು. ಟ್ಯಾಂಕರ್ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದರು.</p>.<p>ನೀರಿನ ಸಮಸ್ಯೆ ನಿವಾರಣೆಯಾಗುವವರೆಗೆ ಬಡಾವಣೆಗೆ ನಿತ್ಯ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಹೇರೊಹಳ್ಳಿ, ಅಂಬೇಡ್ಕರ್ ನಗರ ಸಹಿತ ವಿವಿಧೆಡೆ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ‘ಪ್ರಜಾವಾಣಿ’ ‘ಜಲ ಜಂಜಾಟ’ ವಿಶೇಷ ವರದಿ ಮೂಲಕ ಗಮನ ಸೆಳೆದಿತ್ತು.</p>.<p><strong>ಪೈಪ್ಗೆ ಹಾನಿ–ದುರಸ್ತಿ:</strong> ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಬಳಿ ಕುಡಿಯುವ ನೀರು ಸರಬರಾಜು ಮಾಡುವ ಒಂದು ಸಾವಿರ ಎಂಎಂ ವ್ಯಾಸದ ಪೈಪ್ಲೈನ್ಗೆ ಗುರುವಾರ ಹಾನಿಯಾಗಿತ್ತು.</p>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಕಾರ್ಮಿಕರೊಡಗೂಡಿ ನಿರಂತರ ನಾಲ್ಕು ತಾಸು ಕೆಲಸ ಮಾಡಿ ದುರಸ್ತಿಗೊಳಿಸಿದರು. ರಾಜರಾಜೇಶ್ವರಿ ನಗರಕ್ಕೆ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ನೀರು ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೊಹಳ್ಳಿ ವಾರ್ಡ್ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಉಂಟಾಗಿದ್ದ ನೀರಿನ ಸಮಸ್ಯೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸರಿಪಡಿಸಿದೆ.</p>.<p>ಕೆಂಪೇಗೌಡ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಬಂದು ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡರು. ಬಳಿಕ ಅಧಿಕಾರಿಗಳು ಮತ್ತು ಎಂಜಿನಿಯರ್ಗಳು ಸಮಸ್ಯೆ ಪರಿಶೀಲಿಸಿ, ಕ್ರಮ ಕೈಗೊಂಡರು.</p>.<p><strong>ಅಂಬೇಡ್ಕರ್ ನಗರಕ್ಕೆ ನೀರು:</strong> ನಾಯಂಡಹಳ್ಳಿಯ ಪಂತರ್ಪಾಳ್ಯದ ಅಂಬೇಡ್ಕರ್ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉದ್ಭವವಾಗಿರುವುದನ್ನು ಅರಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರೊಂದಿಗೆ ಚರ್ಚಿಸಿದರು. ಟ್ಯಾಂಕರ್ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದರು.</p>.<p>ನೀರಿನ ಸಮಸ್ಯೆ ನಿವಾರಣೆಯಾಗುವವರೆಗೆ ಬಡಾವಣೆಗೆ ನಿತ್ಯ ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು.</p>.<p>ಹೇರೊಹಳ್ಳಿ, ಅಂಬೇಡ್ಕರ್ ನಗರ ಸಹಿತ ವಿವಿಧೆಡೆ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ‘ಪ್ರಜಾವಾಣಿ’ ‘ಜಲ ಜಂಜಾಟ’ ವಿಶೇಷ ವರದಿ ಮೂಲಕ ಗಮನ ಸೆಳೆದಿತ್ತು.</p>.<p><strong>ಪೈಪ್ಗೆ ಹಾನಿ–ದುರಸ್ತಿ:</strong> ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಬಳಿ ಕುಡಿಯುವ ನೀರು ಸರಬರಾಜು ಮಾಡುವ ಒಂದು ಸಾವಿರ ಎಂಎಂ ವ್ಯಾಸದ ಪೈಪ್ಲೈನ್ಗೆ ಗುರುವಾರ ಹಾನಿಯಾಗಿತ್ತು.</p>.<p>ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಕಾರ್ಮಿಕರೊಡಗೂಡಿ ನಿರಂತರ ನಾಲ್ಕು ತಾಸು ಕೆಲಸ ಮಾಡಿ ದುರಸ್ತಿಗೊಳಿಸಿದರು. ರಾಜರಾಜೇಶ್ವರಿ ನಗರಕ್ಕೆ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ನೀರು ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>