<p><strong>ಬೆಂಗಳೂರು</strong>: ‘ಫ್ಲೆಕ್ಸ್, ಹೋರ್ಡಿಂಗ್, ಬ್ಯಾನರ್ ಮುಂತಾದ ಪ್ರಚಾರ ಫಲಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವುದಕ್ಕೆ ನಿಷೇಧ ವಿಧಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ' ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ.</p>.<p>ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ, ಮಾಯಿಗೇಗೌಡ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>‘ಫ್ಲೆಕ್ಸ್ ಹಾವಳಿ ಮರುಕಳಿಸಿದೆ ಎಂಬ ಅರ್ಜಿದಾರರ ಆರೋಪಕ್ಕೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಕೋರ್ಟ್ ಈ ಬಗ್ಗೆ ವಿಶೇಷ ಗಮನಹರಿಸಲಿದೆ. ಹಾಗಾಗಿ, ಈ ಪ್ರಕರಣದಲ್ಲಿ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರನ್ನು ಅಮಿಕಸ್ ಕ್ಯೂರಿ (ಕೋರ್ಟ್ಗೆ ಸಹಕರಿಸುವ ವಕೀಲ) ಆಗಿ ನೇಮಕ ಮಾಡಲಾಗುವುದು’ ಎಂದು ನ್ಯಾಯಪೀಠ ಆದೇಶಿಸಿತು.</p>.<p>ಅರ್ಜಿದಾರರ ಆಕ್ಷೇಪಣೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಸಲ್ಲಿಸಲು ಬಿಬಿಎಂಪಿಗೆ ಎಂದು ಸೂಚಿಸಿ ವಿಚಾರಣೆಯನ್ನು ಎರಡುವಾರಗಳ ಕಾಲ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಫ್ಲೆಕ್ಸ್, ಹೋರ್ಡಿಂಗ್, ಬ್ಯಾನರ್ ಮುಂತಾದ ಪ್ರಚಾರ ಫಲಕಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವುದಕ್ಕೆ ನಿಷೇಧ ವಿಧಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸಿ' ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ನಿರ್ದೇಶಿಸಿದೆ.</p>.<p>ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ, ಮಾಯಿಗೇಗೌಡ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>‘ಫ್ಲೆಕ್ಸ್ ಹಾವಳಿ ಮರುಕಳಿಸಿದೆ ಎಂಬ ಅರ್ಜಿದಾರರ ಆರೋಪಕ್ಕೆ ಬಿಬಿಎಂಪಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಾರ್ವಜನಿಕ ಹಿತದೃಷ್ಟಿಯಿಂದ ಕೋರ್ಟ್ ಈ ಬಗ್ಗೆ ವಿಶೇಷ ಗಮನಹರಿಸಲಿದೆ. ಹಾಗಾಗಿ, ಈ ಪ್ರಕರಣದಲ್ಲಿ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರನ್ನು ಅಮಿಕಸ್ ಕ್ಯೂರಿ (ಕೋರ್ಟ್ಗೆ ಸಹಕರಿಸುವ ವಕೀಲ) ಆಗಿ ನೇಮಕ ಮಾಡಲಾಗುವುದು’ ಎಂದು ನ್ಯಾಯಪೀಠ ಆದೇಶಿಸಿತು.</p>.<p>ಅರ್ಜಿದಾರರ ಆಕ್ಷೇಪಣೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಸಲ್ಲಿಸಲು ಬಿಬಿಎಂಪಿಗೆ ಎಂದು ಸೂಚಿಸಿ ವಿಚಾರಣೆಯನ್ನು ಎರಡುವಾರಗಳ ಕಾಲ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>