’ನಂದೀಶ್ ಅವರನ್ನು ವಶಕ್ಕೆ ಪಡೆದ ಸಿಬ್ಬಂದಿ, ಠಾಣೆಗೆ ತಂದು ಒಪ್ಪಿಸಿದ್ದರು. ವಿಚಾರಣೆ ನಡೆಸಿದಾಗ, ಪಿಸ್ತೂಲ್ ಪರವಾನಗಿ ಇರುವುದಾಗಿ ನಂದೀಶ್ ಹೇಳಿದ್ದರು. ದಾಖಲೆಗಳ ಪರಿಶೀಲನೆ ನಡೆಸಿದಾಗ ಪರವಾನಗಿ ಇರುವುದು ಖಚಿತವಾಯಿತು. ಅವರಿಂದ ಹೇಳಿಕೆ ಪಡೆದು ವಾಪಸು ಕಳುಹಿಸಲಾಗಿದೆ. ಘಟನೆ ಸಂಬಂಧ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದೂ ತಿಳಿಸಿವೆ.