ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಮಾತನಾಡಿ, ‘ವಿಜ್ಞಾನ ಬೆಳೆದಂತೆ ಸಮಸ್ಯೆಗಳ ಸಂಕೀರ್ಣತೆಯೂ ಬೆಳೆಯುತ್ತಿದ್ದು, ಏಕ ಆಯಾಮದ ಪರಿಹಾರಗಳು ಸಂಕೀರ್ಣ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗುತ್ತಿವೆ. ಈ ನಿಟ್ಟಿನಲ್ಲಿ ಬಹುಶಿಸ್ತೀಯ ತಂತ್ರಜ್ಞಾನದ ಬೆಳವಣಿಗೆ ಅಗತ್ಯವಾಗಿದ್ದು, ಈ ಉದ್ದೇಶದಿಂದ ಈ ಅಧ್ಯಯನ ವಿಭಾಗ ಆರಂಭಿಸಲಾಗಿದೆ’ ಎಂದರು.