<p><strong>ಬೆಂಗಳೂರು: </strong>ರೇವಾ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಹೊಸ ತಂಡವನ್ನು ಬುಧವಾರ ಸ್ವಾಗತಿಸಲಾಯಿತು. ವರ್ಚುವಲ್ ರೂಪದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಬೋಧಕರು ಹಾಗೂ ಪೋಷಕರು ಸಾಕ್ಷಿಯಾದರು.</p>.<p>ಬಿಇ, ಬಿ.ಟೆಕ್, ಬಿ.ಆರ್ಕಿಟೆಕ್ಟ್ ಸೇರಿದಂತೆ ವಿವಿಧ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶ ಪಡೆದ ಸಾವಿರಾರು ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.</p>.<p>ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಶ್ಯಾಮರಾಜು, ‘ಯೋಜನಾಬದ್ಧ ಕಲಿಕೆಯನ್ನು ವಿಶ್ವವಿದ್ಯಾಲಯವು ಖಾತ್ರಿ ಪಡೆಸುತ್ತದೆ. ಜ್ಞಾನದೇಗುಲವಾಗಿರುವ ಇಲ್ಲಿ ವಿದ್ಯಾರ್ಥಿಗಳು ಪಠ್ಯವಿಷಯ ಅರಿಯುವುದರೊಂದಿಗೆ ಸ್ಪರ್ಧಾತ್ಮಕವಾಗಿಯೂ ಬೆಳವಣಿಗೆ ಸಾಧಿಸುತ್ತಾರೆ’ ಎಂದರು.</p>.<p>‘ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಂತಹ ಬೋಧನಾ ಕ್ರಮಗಳನ್ನು ವಿಶ್ವವಿದ್ಯಾಲಯ ಅಳವಡಿಸಿಕೊಂಡಿದೆ. ಡಿಜಿಟಲ್ ಮಾಧ್ಯಮದಲ್ಲಿಯೂ ಸಮರ್ಥವಾಗಿ ಬೋಧಿಸುವ ಸಾಮರ್ಥ್ಯವನ್ನು ಬೋಧಕ ವರ್ಗ ಹೊಂದಿದೆ’ ಎಂದರು.</p>.<p>ಸಿಬಿಐ ಮಾಜಿ ಜಂಟಿ ನಿರ್ದೇಶಕ ವಿ.ವಿ. ಲಕ್ಷ್ಮೀನಾರಾಯಣ, ‘ಕ್ರಿಕೆಟ್ ಮತ್ತು ಸಿನಿಮಾದಲ್ಲಿ ಆಸಕ್ತಿ ಇದ್ದ ವಿದ್ಯಾರ್ಥಿಗಳು ಸುಲಭವಾಗಿ ಅದರಲ್ಲಿ ಯಶಸ್ಸು ಗಳಿಸುತ್ತಾರೆ. ಅದೇ ರೀತಿ, ವ್ಯಾಸಂಗದಲ್ಲಿಯೂ ಆಸಕ್ತಿ ತೋರಿದರೆ ಸಾಧನೆ ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೇವಾ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಹೊಸ ತಂಡವನ್ನು ಬುಧವಾರ ಸ್ವಾಗತಿಸಲಾಯಿತು. ವರ್ಚುವಲ್ ರೂಪದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಬೋಧಕರು ಹಾಗೂ ಪೋಷಕರು ಸಾಕ್ಷಿಯಾದರು.</p>.<p>ಬಿಇ, ಬಿ.ಟೆಕ್, ಬಿ.ಆರ್ಕಿಟೆಕ್ಟ್ ಸೇರಿದಂತೆ ವಿವಿಧ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶ ಪಡೆದ ಸಾವಿರಾರು ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.</p>.<p>ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಶ್ಯಾಮರಾಜು, ‘ಯೋಜನಾಬದ್ಧ ಕಲಿಕೆಯನ್ನು ವಿಶ್ವವಿದ್ಯಾಲಯವು ಖಾತ್ರಿ ಪಡೆಸುತ್ತದೆ. ಜ್ಞಾನದೇಗುಲವಾಗಿರುವ ಇಲ್ಲಿ ವಿದ್ಯಾರ್ಥಿಗಳು ಪಠ್ಯವಿಷಯ ಅರಿಯುವುದರೊಂದಿಗೆ ಸ್ಪರ್ಧಾತ್ಮಕವಾಗಿಯೂ ಬೆಳವಣಿಗೆ ಸಾಧಿಸುತ್ತಾರೆ’ ಎಂದರು.</p>.<p>‘ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವಂತಹ ಬೋಧನಾ ಕ್ರಮಗಳನ್ನು ವಿಶ್ವವಿದ್ಯಾಲಯ ಅಳವಡಿಸಿಕೊಂಡಿದೆ. ಡಿಜಿಟಲ್ ಮಾಧ್ಯಮದಲ್ಲಿಯೂ ಸಮರ್ಥವಾಗಿ ಬೋಧಿಸುವ ಸಾಮರ್ಥ್ಯವನ್ನು ಬೋಧಕ ವರ್ಗ ಹೊಂದಿದೆ’ ಎಂದರು.</p>.<p>ಸಿಬಿಐ ಮಾಜಿ ಜಂಟಿ ನಿರ್ದೇಶಕ ವಿ.ವಿ. ಲಕ್ಷ್ಮೀನಾರಾಯಣ, ‘ಕ್ರಿಕೆಟ್ ಮತ್ತು ಸಿನಿಮಾದಲ್ಲಿ ಆಸಕ್ತಿ ಇದ್ದ ವಿದ್ಯಾರ್ಥಿಗಳು ಸುಲಭವಾಗಿ ಅದರಲ್ಲಿ ಯಶಸ್ಸು ಗಳಿಸುತ್ತಾರೆ. ಅದೇ ರೀತಿ, ವ್ಯಾಸಂಗದಲ್ಲಿಯೂ ಆಸಕ್ತಿ ತೋರಿದರೆ ಸಾಧನೆ ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>