ಶಿವರಾಮ ಕಾರಂತ ಬಡಾವಣೆಗೆ 416 ಎಕರೆ ಜಮೀನು ಹಸ್ತಾಂತರ ಮಾಡುವಂತೆ ಕಂದಾಯ ಇಲಾಖೆಗೆ ನಿರ್ದೇಶನ ನೀಡಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆಗ, ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ನಿರ್ದೇಶನ ನೀಡಲಾಗಿತ್ತು. ಕಂದಾಯ ನಿವೇಶನಗಳ ನೋಂದಣಿ ಮತ್ತು ಅನಧಿಕೃತ ಬಡಾವಣೆಗಳ ಸಕ್ರಮದ ವಿಚಾರದಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಇದರಿಂದ ಸರ್ಕಾರಕ್ಕೆ ₹ 5,000 ಕೋಟಿಯಿಂದ ₹ 6,000 ಕೋಟಿಯಷ್ಟು ಆದಾಯ ಸಂಗ್ರಹವಾಗಲಿದೆ. ಆದರೆ, ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗ ಯಾವುದೇ ನಿರ್ಧಾರ ಮಾಡಲಾಗದು ಎಂದು ಹೇಳಿದರು.