<p><strong>ಬೆಂಗಳೂರು</strong>: ಅನ್ಯ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಎರವಲು ಸೇವೆ ಮೇಲೆ ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆಯು ತಾಲ್ಲೂಕು ಮ್ಯಾಜಿಸ್ಟ್ರೇಟ್ ಗ್ರೇಡ್ ಹುದ್ದೆಯಾಗಿದ್ದು, ಈ ಮೊದಲಿನಂತೆ ಕೆಪಿಎಸ್ಸಿ ನಡೆಸುವ ಕೆಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾದವರನ್ನು ಮತ್ತು ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಅನುಭವ ಪಡೆದವರನ್ನು ಮಾತ್ರ ಈ ಹುದ್ದೆಗೆ ಪರಿಗಣಿಸಬೇಕು’ ಎಂದು ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಅನ್ಯ ಇಲಾಖೆಯಿಂದ ಬಂದು ರಾಜ್ಯದ ಹಲವೆಡೆ ತಹಶೀಲ್ದಾರ್ ಆಗಿ ಸೇವೆಸಲ್ಲಿಸುತ್ತಿರುವವರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಿ, ಇದರಿಂದ ತೆರವಾಗುವ ಹುದ್ದೆಗಳಿಗೆ ಕಂದಾಯ ಇಲಾಖೆಯಲ್ಲಿ ಆರಂಭದಿಂದ ಸೇವೆ ಸಲ್ಲಿಸಿ ಮುಂಬಡ್ತಿ ಪಡೆವರನ್ನು ನೇಮಿಸಬೇಕು’ ಎಂದು ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.</p>.<p>ಸಂಘದ ಗೌರವ ಅಧ್ಯಕ್ಷ ಸಿದ್ದರಾಜು ಮದ್ದೂರು, ಹಿರಿಯ ಉಪಾಧ್ಯಕ್ಷ ರಾಜಶೇಖರಮೂರ್ತಿ, ಕಾರ್ಯದರ್ಶಿ ತಾವರೆಕೆರೆ ಕೆ. ಸಿದ್ದರಾಜು, ಖಜಾಂಚಿ ಕೆಂಪೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅನ್ಯ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಎರವಲು ಸೇವೆ ಮೇಲೆ ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆಯು ತಾಲ್ಲೂಕು ಮ್ಯಾಜಿಸ್ಟ್ರೇಟ್ ಗ್ರೇಡ್ ಹುದ್ದೆಯಾಗಿದ್ದು, ಈ ಮೊದಲಿನಂತೆ ಕೆಪಿಎಸ್ಸಿ ನಡೆಸುವ ಕೆಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾದವರನ್ನು ಮತ್ತು ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಅನುಭವ ಪಡೆದವರನ್ನು ಮಾತ್ರ ಈ ಹುದ್ದೆಗೆ ಪರಿಗಣಿಸಬೇಕು’ ಎಂದು ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಅನ್ಯ ಇಲಾಖೆಯಿಂದ ಬಂದು ರಾಜ್ಯದ ಹಲವೆಡೆ ತಹಶೀಲ್ದಾರ್ ಆಗಿ ಸೇವೆಸಲ್ಲಿಸುತ್ತಿರುವವರನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಿ, ಇದರಿಂದ ತೆರವಾಗುವ ಹುದ್ದೆಗಳಿಗೆ ಕಂದಾಯ ಇಲಾಖೆಯಲ್ಲಿ ಆರಂಭದಿಂದ ಸೇವೆ ಸಲ್ಲಿಸಿ ಮುಂಬಡ್ತಿ ಪಡೆವರನ್ನು ನೇಮಿಸಬೇಕು’ ಎಂದು ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.</p>.<p>ಸಂಘದ ಗೌರವ ಅಧ್ಯಕ್ಷ ಸಿದ್ದರಾಜು ಮದ್ದೂರು, ಹಿರಿಯ ಉಪಾಧ್ಯಕ್ಷ ರಾಜಶೇಖರಮೂರ್ತಿ, ಕಾರ್ಯದರ್ಶಿ ತಾವರೆಕೆರೆ ಕೆ. ಸಿದ್ದರಾಜು, ಖಜಾಂಚಿ ಕೆಂಪೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>