ಕಳೆದ 20 ವರ್ಷಗಳಿಂದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪರಿಷ್ಕರಣೆಯಾಗಿಲ್ಲ. ಹಲವು ಬಾರಿ ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ ಅಧ್ಯಯನಗಳನ್ನು ನಡೆಸಿ ಮೀಸಲಾತಿ ಕಲ್ಪಿಸುವ ಬಗ್ಗೆ ಸ್ಪಷ್ಟವಾದ ಶಿಫಾರಸ್ಸುಗಳನ್ನು ಮಾಡಿದೆ. ಆದರೆ, ರಾಜಕೀಯ ತೀರ್ಮಾನಗಳಿಂದಾಗಿ ಬಲಾಢ್ಯರು ಮೀಸಲಾತಿ ಪಡೆದು ಶೋಷಿತರ ಪಾಲನ್ನು ಕಬಳಿಸುತ್ತಿದ್ದಾರೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಣ್ಣೆಗೆರೆ ಆರ್. ವೆಂಕಟರಾಮಯ್ಯ ಅವರು ತಿಳಿಸಿದ್ದಾರೆ.