ವೇದಿಕೆಯ ಮುಖಂಡ ಎಚ್.ಎಂ.ವೆಂಕಟೇಶ್ ಈ ಸಂಬಂಧ ಮನವಿ ಪತ್ರ ಬರೆದಿದ್ದು, ‘ಮತ ದಾರರ ಖಾಸಗಿ ಮಾಹಿತಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ 2 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಸರ್ಕಾರದಿಂದ ಸತ್ಯಾಸತ್ಯತೆ ಹೊರಬರುವ ನಂಬಿಕೆಯಿಲ್ಲ. ಕಾರಣ, ತಾವು ಮಧ್ಯ ಪ್ರವೇಶಿಸಿ ನ್ಯಾಯಮೂರ್ತಿಗಳ ಸುಪರ್ದಿಯಲ್ಲಿಯೇ ಈ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು. ‘ಕಾನೂನಿನ ಚೌಕಟ್ಟಿನಡಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ನಮ್ಮ ಈ ಮನವಿಯನ್ನು ಪಿಐಎಲ್ ಆಗಿ ಪರಿಗಣಿಸಬೇಕು’ ಎಂದಿದ್ದಾರೆ.