ಇಲ್ಲಿ ಚಿಕಿತ್ಸೆ ಪಡೆಯಲು ವಿವಿಧ ಜಿಲ್ಲೆಗಳಲ್ಲದೇ, ಹೊರರಾಜ್ಯಗಳಿಂದಲೂ ರೋಗಿಗಳು ಬರುತ್ತಾರೆ. ಸದ್ಯ ಪ್ರತಿ ರೋಗಿ ಜತೆಗೆ ಸಹಾಯಕರೊಬ್ಬರಿಗೆ ಆಸ್ಪತ್ರೆಯಲ್ಲಿ ಉಳಿಯಲು ಅವಕಾಶವಿದೆ. ದೂರದಿಂದ ಬರುವ ರೋಗಿಗಳ ಸಂಬಂಧಿಗಳಿಗೆ ವಸತಿ ಸಮಸ್ಯೆ ಕಾಡುತ್ತಿತ್ತು. ಹೀಗಾಗಿ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಮಾದರಿಯಲ್ಲಿಯೇ ರೋಗಿಗಳ ಸಹಾಯಕರಿಗೆ ಪ್ರತ್ಯೇಕ ವಿಶ್ರಾಂತಿ ಧಾಮ ನಿರ್ಮಿಸಲಾಗುತ್ತಿದೆ.