<p><strong>ಬೆಂಗಳೂರು: </strong>ರೈಸ್ ಪುಲ್ಲಿಂಗ್ ನೆಪದಲ್ಲಿ ಉದ್ಯಮಿಯೊಬ್ಬರಿಂದ ₹ 2 ಕೋಟಿ ಪಡೆದು ವಂಚಿಸಿದ್ದ ನಾಲ್ವರು ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅದರ ಬೆನ್ನಲ್ಲೇ ಆರೋಪಿ ಸಂಬಂಧಿಯೊಬ್ಬರು, ‘ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಆರೋಪಿಸಿದ್ದಾರೆ.</p>.<p>‘ವಂಚನೆ ಸಂಬಂಧ ಉದ್ಯಮಿ ಎನ್.ಪಿ.ಮಹೇಶ್ ಎಂಬುವರು ದೂರು ನೀಡಿದ್ದರು. ಅದರನ್ವಯ ಆರೋಪಿಗಳಾದ ಹೊಸೂರಿನ ಶಿವಕುಮಾರ್, ಗೋಪಾಲ್, ಮಹೇಶ್ ಅಲಿಯಾಸ್ ಮಹೇಂದ್ರ ಹಾಗೂ ನಾಗರಾಜ್ ಎಂಬುವರನ್ನು ಬಂಧಿಸಲಾಗಿದೆ’<br />ಎಂದು ಮಾರತ್ತಹಳ್ಳಿ ಪೊಲೀಸರು ಹೇಳಿದರು.</p>.<p>ಸಾರಿಗೆ ಉದ್ಯಮಿಯಾದ ಮಹೇಶ್ ಅವರನ್ನು 2019ರಲ್ಲಿ ಭೇಟಿಯಾಗಿದ್ದ ಆರೋಪಿಗಳು, ತಮ್ಮದೇ ಪಾಲುದಾರಿಕೆಯಲ್ಲಿ ಉದ್ಯಮವನ್ನು ಆಂಧ್ರಪ್ರದೇಶ ಹಾಗೂ ಇತರ ಸ್ಥಳಗಳಲ್ಲಿ ವಿಸ್ತರಣೆ ಮಾಡುವುದಾಗಿ ಹೇಳಿದ್ದರು.</p>.<p>‘ತಮ್ಮ ಬಳಿ ‘ರೈಸ್ ಪುಲ್ಲಿಂಗ್’ ಚೆಂಬು ಇದೆ ಎಂದು ಹೇಳಿದ್ದ ಆರೋಪಿಗಳು, ‘ಚೆಂಬು ಪರೀಕ್ಷೆ ಮಾಡಿಸಬೇಕು. ಅದರ ಖರ್ಚಿಗೆ ₹ 2 ಕೋಟಿ ಬೇಕು ಎಂದು ಕೇಳಿ ಹಣ ಪಡೆದು ವಂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೈಸ್ ಪುಲ್ಲಿಂಗ್ ನೆಪದಲ್ಲಿ ಉದ್ಯಮಿಯೊಬ್ಬರಿಂದ ₹ 2 ಕೋಟಿ ಪಡೆದು ವಂಚಿಸಿದ್ದ ನಾಲ್ವರು ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅದರ ಬೆನ್ನಲ್ಲೇ ಆರೋಪಿ ಸಂಬಂಧಿಯೊಬ್ಬರು, ‘ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು’ ಎಂದು ಆರೋಪಿಸಿದ್ದಾರೆ.</p>.<p>‘ವಂಚನೆ ಸಂಬಂಧ ಉದ್ಯಮಿ ಎನ್.ಪಿ.ಮಹೇಶ್ ಎಂಬುವರು ದೂರು ನೀಡಿದ್ದರು. ಅದರನ್ವಯ ಆರೋಪಿಗಳಾದ ಹೊಸೂರಿನ ಶಿವಕುಮಾರ್, ಗೋಪಾಲ್, ಮಹೇಶ್ ಅಲಿಯಾಸ್ ಮಹೇಂದ್ರ ಹಾಗೂ ನಾಗರಾಜ್ ಎಂಬುವರನ್ನು ಬಂಧಿಸಲಾಗಿದೆ’<br />ಎಂದು ಮಾರತ್ತಹಳ್ಳಿ ಪೊಲೀಸರು ಹೇಳಿದರು.</p>.<p>ಸಾರಿಗೆ ಉದ್ಯಮಿಯಾದ ಮಹೇಶ್ ಅವರನ್ನು 2019ರಲ್ಲಿ ಭೇಟಿಯಾಗಿದ್ದ ಆರೋಪಿಗಳು, ತಮ್ಮದೇ ಪಾಲುದಾರಿಕೆಯಲ್ಲಿ ಉದ್ಯಮವನ್ನು ಆಂಧ್ರಪ್ರದೇಶ ಹಾಗೂ ಇತರ ಸ್ಥಳಗಳಲ್ಲಿ ವಿಸ್ತರಣೆ ಮಾಡುವುದಾಗಿ ಹೇಳಿದ್ದರು.</p>.<p>‘ತಮ್ಮ ಬಳಿ ‘ರೈಸ್ ಪುಲ್ಲಿಂಗ್’ ಚೆಂಬು ಇದೆ ಎಂದು ಹೇಳಿದ್ದ ಆರೋಪಿಗಳು, ‘ಚೆಂಬು ಪರೀಕ್ಷೆ ಮಾಡಿಸಬೇಕು. ಅದರ ಖರ್ಚಿಗೆ ₹ 2 ಕೋಟಿ ಬೇಕು ಎಂದು ಕೇಳಿ ಹಣ ಪಡೆದು ವಂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>