ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ನಾಡ ಬಂದೂಕು ಜಪ್ತಿ; ಆರೋಪಿ ಬಂಧನ

Last Updated 19 ಫೆಬ್ರುವರಿ 2021, 16:00 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತರಲಾಗಿದ್ದ 11 ನಾಡ ಬಂದೂಕುಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಜಪ್ತಿ ಮಾಡಿದ್ದು, ಆ ಸಂಬಂಧ ಲಿಂಗಾಚಾರಿ ಎಂಬುವರನ್ನು (58) ಬಂಧಿಸಿದ್ದಾರೆ.

‘ರಾಮನಗರ ಜಿಲ್ಲೆಯ ಕನಕಪುರದ ಮಹಾರಾಜ್‌ ಕಟ್ಟೆಯ ನಿವಾಸಿ ಲಿಂಗಾಚಾರಿ, ತನ್ನ ಬಳಿ ಬಂದೂಕು ಇಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ. ಅದೇ ವೇಳೆ ದಾಳಿ ಮಾಡಿ ಆತನನ್ನು ಬಂಧಿಸಲಾಗಿದೆ. ಆತನಿಂದ 11 ನಾಡ ಬಂದೂಕು (ಸಿಂಗಲ್ ಬ್ಯಾರಲ್) ಹಾಗೂ ಬಂದೂಕಿನ ಬಿಡಿ ಭಾಗಗಳನ್ನು ಜಪ್ತಿ ಮಾಡಲಾಗಿದೆ' ಎಂದು ಪೊಲೀಸರು ಹೇಳಿದರು.

'ಬೈಕ್‌ನಲ್ಲಿ ನಗರಕ್ಕೆ ಬಂದಿದ್ದ ಆರೋಪಿ, ಬನಶಂಕರಿ ಮೂರನೇ ಹಂತದ ಇಟ್ಟಮಡು ಬಳಿ ನಿಂತಿದ್ದ. ಬಂದೂಕುಗಳನ್ನು ಪ್ಲಾಸ್ಟಿಕ್ ಚೀಲದಿಂದ ಮುಚ್ಚಿಕೊಂಡಿದ್ದ. ಅನುಮಾನಗೊಂಡ ಸ್ಥಳೀಯರೊಬ್ಬರು ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಆರೋಪಿ ಸಿಕ್ಕಿಬಿದ್ದ' ಎಂದೂ ಅವರು ತಿಳಿಸಿದರು.

'ನಗರದಲ್ಲಿ ಕೆಲವರಿಗೆ ಬಂದೂಕು ಮಾರಾಟ ಮಾಡಲು ಬಂದಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ. ಯಾರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ' ಎಂದೂ ಅವರು ಹೇಳಿದರು.

‘ಕಬ್ಬಿಣದ ಬ್ಯಾರಲ್ ಕೊಳವೆಗಳು, ಮದ್ದು ತುಂಬಲು ಬಳಸುವ ಸರಳುಗಳು, ಕಬ್ಬಿಣದ ಇಕ್ಕಳ ಹಾಗೂ ಇತರೆ ವಸ್ತುಗಳೂ ಆರೋಪಿ ಬಳಿ ಸಿಕ್ಕಿವೆ. ಆರೋಪಿಯೇ ಬಂದೂಕು ತಯಾರಿ ಮಾಡುತ್ತಿದ್ದ ಅನುಮಾನವೂ ಇದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT