<p><strong>ಬೆಂಗಳೂರು:</strong>ನದಿ ಮೂಲ ಸಂರಕ್ಷಣಾ ಯೋಜನೆ, ಬಯಲು ಸೀಮೆ ವನವಿಕಾಸ ಯೋಜನೆ, ಕರಾವಳಿ ಹಸಿರು ಕವಚ ಯೋಜನೆಗಳಂತಹ ಹಲವು ವಿನೂತನ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕುರಿತುಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಇಲ್ಲಿ ಭೇಟಿ ಮಾಡಿದ ಅಶೀಸರ ನೇತೃತ್ವದ ನಿಯೋಗ,2020-21ನೇ ಸಾಲಿನ ಬಜೆಟ್ನಲ್ಲಿ ನಾಡಿನ ಜನತೆಯ ಗಮನ ಸೆಳೆಯಬಹುದಾದ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>ಉತ್ತರ ಕನ್ನಡ ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್ ಸೊಪ್ಪಿನ ಬೆಟ್ಟ ಪ್ರದೇಶವಿದ್ದು, ರೈತರ ಸಹಭಾಗಿತ್ವ<br />ದಲ್ಲಿ 5 ಸಾವಿರ ಹೆಕ್ಟೇರ್ ಸೊಪ್ಪಿನ ಬೆಟ್ಟ ಅಭಿವೃದ್ಧಿ ಯೋಜನೆ ಸೇರ್ಪಡೆಗೊಳಿಸ ಬೇಕು, ದೇವರಕಾಡು–ಕಾನು ಅಭಿ ವೃದ್ಧಿ ಯೋಜನೆ ಪುನಃ ಜಾರಿಗೆ ತರಬೇಕು, ಬಿದಿರು ಬಂಗಾರ ಯೋಜನೆ, ಔಷಧಿ ಸಸ್ಯಗಲ ಬೆಳೆಸುವ ಯೋಜನೆ ಆರಂಭಿ ಸಬೇಕು ಎಂದು ಒತ್ತಾಯಿಸಲಾಯಿತು.</p>.<p>ರೈತರಿಗೆ ಸೋಲಾರ್ ಯೋಜನೆ ಜಾರಿಗೆ ತಂದು, ಶೇ 50ರಷ್ಟು ಸಬ್ಸಿಡಿ ನೀಡಬೇಕು, ಹಿತ್ತಿಲ ಹೊನ್ನು ಯೋಜನೆ ಮೂಲಕ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ರಾಜ್ಯದ 36 ಸಾವಿರ ಕೆರೆಗಳ ಪೈಕಿ ಪ್ರತಿ ಜಿಲ್ಲೆಯಲ್ಲಿ 100 ಕೆರೆಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಜೈವಿಕ ಇಂಧನ ತಜ್ಞ ವೈ.ಬಿ.ರಾಮಕೃಷ್ಣ,ವಿಜ್ಞಾನಿ ಡಾ.ಟಿ.ವಿ. ರಾಮಚಂದ್ರ,ಪರಿಸರ ತಜ್ಞ ಡಾ.ಕೇಶವ ಕೋರ್ಸೆ, ‘ವೃಕ್ಷಲಕ್ಷ’ ಸಂಚಾಲಕ ಬಿ.ಎಚ್. ರಾಘವೇಂದ್ರ,ಕಾನೂನು ತಜ್ಞ ಡಾ.ಎಂ.ಕೆ. ರಮೇಶ್,ತೋಟಗಾರಿಕಾ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಎಸ್.ಬಿ. ದಂಡಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ನದಿ ಮೂಲ ಸಂರಕ್ಷಣಾ ಯೋಜನೆ, ಬಯಲು ಸೀಮೆ ವನವಿಕಾಸ ಯೋಜನೆ, ಕರಾವಳಿ ಹಸಿರು ಕವಚ ಯೋಜನೆಗಳಂತಹ ಹಲವು ವಿನೂತನ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕುರಿತುಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಇಲ್ಲಿ ಭೇಟಿ ಮಾಡಿದ ಅಶೀಸರ ನೇತೃತ್ವದ ನಿಯೋಗ,2020-21ನೇ ಸಾಲಿನ ಬಜೆಟ್ನಲ್ಲಿ ನಾಡಿನ ಜನತೆಯ ಗಮನ ಸೆಳೆಯಬಹುದಾದ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>ಉತ್ತರ ಕನ್ನಡ ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್ ಸೊಪ್ಪಿನ ಬೆಟ್ಟ ಪ್ರದೇಶವಿದ್ದು, ರೈತರ ಸಹಭಾಗಿತ್ವ<br />ದಲ್ಲಿ 5 ಸಾವಿರ ಹೆಕ್ಟೇರ್ ಸೊಪ್ಪಿನ ಬೆಟ್ಟ ಅಭಿವೃದ್ಧಿ ಯೋಜನೆ ಸೇರ್ಪಡೆಗೊಳಿಸ ಬೇಕು, ದೇವರಕಾಡು–ಕಾನು ಅಭಿ ವೃದ್ಧಿ ಯೋಜನೆ ಪುನಃ ಜಾರಿಗೆ ತರಬೇಕು, ಬಿದಿರು ಬಂಗಾರ ಯೋಜನೆ, ಔಷಧಿ ಸಸ್ಯಗಲ ಬೆಳೆಸುವ ಯೋಜನೆ ಆರಂಭಿ ಸಬೇಕು ಎಂದು ಒತ್ತಾಯಿಸಲಾಯಿತು.</p>.<p>ರೈತರಿಗೆ ಸೋಲಾರ್ ಯೋಜನೆ ಜಾರಿಗೆ ತಂದು, ಶೇ 50ರಷ್ಟು ಸಬ್ಸಿಡಿ ನೀಡಬೇಕು, ಹಿತ್ತಿಲ ಹೊನ್ನು ಯೋಜನೆ ಮೂಲಕ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ರಾಜ್ಯದ 36 ಸಾವಿರ ಕೆರೆಗಳ ಪೈಕಿ ಪ್ರತಿ ಜಿಲ್ಲೆಯಲ್ಲಿ 100 ಕೆರೆಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಜೈವಿಕ ಇಂಧನ ತಜ್ಞ ವೈ.ಬಿ.ರಾಮಕೃಷ್ಣ,ವಿಜ್ಞಾನಿ ಡಾ.ಟಿ.ವಿ. ರಾಮಚಂದ್ರ,ಪರಿಸರ ತಜ್ಞ ಡಾ.ಕೇಶವ ಕೋರ್ಸೆ, ‘ವೃಕ್ಷಲಕ್ಷ’ ಸಂಚಾಲಕ ಬಿ.ಎಚ್. ರಾಘವೇಂದ್ರ,ಕಾನೂನು ತಜ್ಞ ಡಾ.ಎಂ.ಕೆ. ರಮೇಶ್,ತೋಟಗಾರಿಕಾ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ.ಎಸ್.ಬಿ. ದಂಡಿನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>