<p><strong>ಬೆಂಗಳೂರು:</strong> ಜಲಕ್ಷಾಮದಿಂದ ತತ್ತರಿಸಿರುವ 30 ಸಾವಿರ ಗ್ರಾಮಗಳ ಸುಮಾರು 36 ಸಾವಿರ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ.</p>.<p>ಈ ಗ್ರಾಮಗಳಲ್ಲಿ ಜಲ ಸುರಕ್ಷತೆಯ ಉದ್ದೇಶದಿಂದ ಪಶ್ಚಿಮದ ಕಡೆಗೆ ಹರಿಯುವ ನದಿಗಳ ಹೆಚ್ಚುವರಿ ನೀರನ್ನು ಈ ಯೋಜನೆಗೆ ಬಳಸಿಕೊಳ್ಳಲಾಗುವುದು. ಸುಮಾರು 484 ಟಿಎಂಸಿ ಅಡಿ ನೀರನ್ನು ತಿರುಗಿಸುವ ಮೂಲಕ ಕೆರೆ–ಕೊಳ್ಳಗಳನ್ನು ತುಂಬಿಸಲಾಗುತ್ತದೆ.</p>.<p>ಮುಖ್ಯಮಂತ್ರಿಯವರು ತಮ್ಮ ಕನಸಿನ ಯೋಜನೆಯ ವಿವರಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇದೇ ತಿಂಗಳ 10 ರಂದು ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಆ ಪತ್ರ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>‘ಅಂತರ್ ನದಿ ಪಾತ್ರಗಳ ನೀರಿನ ವರ್ಗಾವಣೆ ಮೂಲಕ ಹೆಚ್ಚುವರಿ ನೀರನ್ನು ತಿರುಗಿಸಿ, ಕೆರೆ– ಕೊಳ್ಳಗಳನ್ನು ತುಂಬಬಹುದಾಗಿದೆ. ಇದರಿಂದ ಅಷ್ಟೂ ಹಳ್ಳಿಗಳ ಅಂತರ್ಜಲವನ್ನು ಪುನಶ್ಚೇತನಗೊಳಿಸಬಹುದಾಗಿದೆ. ರೈತರ ಬದುಕು ಸಮೃದ್ಧಿಯಾಗಲಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ನ್ಯಾಷನಲ್ ಪರ್ಸ್ಪೆಕ್ಟಿವ್ ಪ್ಲಾನ್ (ಎನ್ಪಿಪಿ) ಯೋಜನೆ ಅಡಿ ಅನುಮತಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>.<p>‘ಒಂದು ಕೆರೆ– ಆ ಕೆರೆಗೆ ನದಿಯ ನೀರು’ ಎಂಬ ಘೋಷವಾಕ್ಯದಡಿ ದೊಡ್ಡ ಮಟ್ಟದಲ್ಲಿ ಯೋಜನೆಗೆ ಚಾಲನೆ ನೀಡಲು ಯಡಿಯೂರಪ್ಪ ಉದ್ದೇಶಿಸಿದ್ದಾರೆ. ಈ ಯೋಜನೆಯನ್ನು ಜಾರಿಗೊಳಿಸಲು ತುಮಕೂರು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ವಿವಿಧ ನದಿ ನೀರಿನ ವಿವಾದಗಳಲ್ಲಿ ನ್ಯಾಯಮಂಡಳಿಗಳು ರಾಜ್ಯಕ್ಕೆ 1,230 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿವೆ. ಆದರೆ, ರಾಜ್ಯಕ್ಕೆ 2050ರ ವೇಳೆಗೆ ಕುಡಿಯುವ ಉದ್ದೇಶ, ಕೈಗಾರಿಕೆ ಮತ್ತು ನೀರಾವರಿಗಾಗಿ 3 ಸಾವಿರ ಟಿಎಂಸಿ ಅಡಿಗಳಷ್ಟು ನೀರು ಬೇಕಾಗುತ್ತದೆ. ಅಂದರೆ 1,770 ಟಿಎಂಸಿ ಅಡಿ ನೀರು ಕೊರತೆ ಆಗುತ್ತದೆ. ರಾಜ್ಯ ಸರ್ಕಾರಜಲ ಸಂರಕ್ಷಣೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ, ಹಲವು ಅಧ್ಯಯನ ವರದಿಗಳು ಅಂತರ್ ನದಿ ಪಾತ್ರಗಳ ನೀರಿನ ವರ್ಗಾವಣೆ ಸೂಕ್ತವೆಂದು ಹೇಳಿವೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಲಕ್ಷಾಮದಿಂದ ತತ್ತರಿಸಿರುವ 30 ಸಾವಿರ ಗ್ರಾಮಗಳ ಸುಮಾರು 36 ಸಾವಿರ ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ.</p>.<p>ಈ ಗ್ರಾಮಗಳಲ್ಲಿ ಜಲ ಸುರಕ್ಷತೆಯ ಉದ್ದೇಶದಿಂದ ಪಶ್ಚಿಮದ ಕಡೆಗೆ ಹರಿಯುವ ನದಿಗಳ ಹೆಚ್ಚುವರಿ ನೀರನ್ನು ಈ ಯೋಜನೆಗೆ ಬಳಸಿಕೊಳ್ಳಲಾಗುವುದು. ಸುಮಾರು 484 ಟಿಎಂಸಿ ಅಡಿ ನೀರನ್ನು ತಿರುಗಿಸುವ ಮೂಲಕ ಕೆರೆ–ಕೊಳ್ಳಗಳನ್ನು ತುಂಬಿಸಲಾಗುತ್ತದೆ.</p>.<p>ಮುಖ್ಯಮಂತ್ರಿಯವರು ತಮ್ಮ ಕನಸಿನ ಯೋಜನೆಯ ವಿವರಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇದೇ ತಿಂಗಳ 10 ರಂದು ಪತ್ರದ ಮೂಲಕ ಹಂಚಿಕೊಂಡಿದ್ದಾರೆ. ಆ ಪತ್ರ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>‘ಅಂತರ್ ನದಿ ಪಾತ್ರಗಳ ನೀರಿನ ವರ್ಗಾವಣೆ ಮೂಲಕ ಹೆಚ್ಚುವರಿ ನೀರನ್ನು ತಿರುಗಿಸಿ, ಕೆರೆ– ಕೊಳ್ಳಗಳನ್ನು ತುಂಬಬಹುದಾಗಿದೆ. ಇದರಿಂದ ಅಷ್ಟೂ ಹಳ್ಳಿಗಳ ಅಂತರ್ಜಲವನ್ನು ಪುನಶ್ಚೇತನಗೊಳಿಸಬಹುದಾಗಿದೆ. ರೈತರ ಬದುಕು ಸಮೃದ್ಧಿಯಾಗಲಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ನ್ಯಾಷನಲ್ ಪರ್ಸ್ಪೆಕ್ಟಿವ್ ಪ್ಲಾನ್ (ಎನ್ಪಿಪಿ) ಯೋಜನೆ ಅಡಿ ಅನುಮತಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.</p>.<p>‘ಒಂದು ಕೆರೆ– ಆ ಕೆರೆಗೆ ನದಿಯ ನೀರು’ ಎಂಬ ಘೋಷವಾಕ್ಯದಡಿ ದೊಡ್ಡ ಮಟ್ಟದಲ್ಲಿ ಯೋಜನೆಗೆ ಚಾಲನೆ ನೀಡಲು ಯಡಿಯೂರಪ್ಪ ಉದ್ದೇಶಿಸಿದ್ದಾರೆ. ಈ ಯೋಜನೆಯನ್ನು ಜಾರಿಗೊಳಿಸಲು ತುಮಕೂರು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ವಿವಿಧ ನದಿ ನೀರಿನ ವಿವಾದಗಳಲ್ಲಿ ನ್ಯಾಯಮಂಡಳಿಗಳು ರಾಜ್ಯಕ್ಕೆ 1,230 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿವೆ. ಆದರೆ, ರಾಜ್ಯಕ್ಕೆ 2050ರ ವೇಳೆಗೆ ಕುಡಿಯುವ ಉದ್ದೇಶ, ಕೈಗಾರಿಕೆ ಮತ್ತು ನೀರಾವರಿಗಾಗಿ 3 ಸಾವಿರ ಟಿಎಂಸಿ ಅಡಿಗಳಷ್ಟು ನೀರು ಬೇಕಾಗುತ್ತದೆ. ಅಂದರೆ 1,770 ಟಿಎಂಸಿ ಅಡಿ ನೀರು ಕೊರತೆ ಆಗುತ್ತದೆ. ರಾಜ್ಯ ಸರ್ಕಾರಜಲ ಸಂರಕ್ಷಣೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ, ಹಲವು ಅಧ್ಯಯನ ವರದಿಗಳು ಅಂತರ್ ನದಿ ಪಾತ್ರಗಳ ನೀರಿನ ವರ್ಗಾವಣೆ ಸೂಕ್ತವೆಂದು ಹೇಳಿವೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>