ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ಜಾರ್ಖಂಡ್ನ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೆಜೆಸ್ಟಿಕ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಪ್ರಭಾನಂದ ಕಾರುವಾಲಿ (30) ಮೃತವ್ಯಕ್ತಿ. ಕೆಲಸ ಅರಸಿ ನಗರಕ್ಕೆ ಬಂದಿದ್ದ ಕಾರುವಾಲಿ, ಸ್ನೇಹಿತನ ಮನೆಯಲ್ಲಿ ವಾಸವಾಗಿದ್ದ.
ಕೆಲಸದ ನಿಮಿತ್ತ ಮೆಜೆಸ್ಟಿಕ್ ಸಮೀಪದ ಎಲೈಟ್ ಜಂಕ್ಷನ್ ಬಳಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆಬಂದಿದ್ದ ಕಾರುವಾಲಿ, ರಸ್ತೆ ದಾಟುತ್ತಿದ್ದ ವೇಳೆ ಅತಿವೇಗದಿಂದ ಬಂದ ಬಸ್ ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದಕಾರುವಾಲಿ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಸಾವು ಸಂಭವಿಸಿದೆ.
ಘಟನೆ ಸಂಬಂಧ ಬಸ್ ಚಾಲಕ ಮಹದೇವ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಉಪ್ಪಾರಪೇಟೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.