ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಮೂವರು ಟೆಕಿಗಳ ದುರ್ಮರಣ

Last Updated 6 ಮೇ 2019, 5:19 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಬಸವೇಶ್ವರ ನಗರದಲ್ಲಿ ಭಾನುವಾರ ತಡರಾತ್ರಿ ರಸ್ತೆ‌ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಮೂವರು ಟೆಕಿಗಳು ಸ್ಥಳದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.

ಅನಿಲ್, ಕಾರ್ತಿಕ್ ಹಾಗೂ ಶ್ರೀನಾಥ್ ಮೃತರು. ಮೂವರು ಒಂದೇ ಬೈಕ್‌ನಲ್ಲಿ ಹೊರಟಿದ್ದರು. ಕಾರ್ತಿಕ್ ಬೈಕ್ ಚಲಾಯಿಸುತ್ತಿದ್ದರು ಎಂದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ತಿಳಿಸಿದರು.

‘ಬೈಕ್ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಮೂವರು ಹೆಲ್ಮೆಟ್ ಹಾಕಿರಲಿಲ್ಲ. ತಲೆಗೆ ಗಂಭೀರ ಪೆಟ್ಟು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT