‘ಬಾಗಲಗುಂಟೆಯ ಸುಮಂತ್, ಆಸ್ಪತ್ರೆಯೊಂದರ ಆಂಬುಲೆನ್ಸ್ ಚಾಲಕ. ಶುಕ್ರವಾರ ರಾತ್ರಿ 10.45 ಗಂಟೆ ಸುಮಾರಿಗೆ ಕೆ.ಆರ್. ಮಾರುಕಟ್ಟೆಯಿಂದ ಹೊಸಗುಡ್ಡದಹಳ್ಳಿ ಕಡೆಗೆ ಹೊರಟಿದ್ದ. ಆಂಬುಲೆನ್ಸ್ನಲ್ಲಿ ಒಬ್ಬನೇ ಇದ್ದ. ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಆಂಬುಲೆನ್ಸ್ ಚಲಾಯಿಸಿದ್ದ. ನಿಯಂತ್ರಣ ತಪ್ಪಿದ್ದ ಆಂಬುಲೆನ್ಸ್, ಸಿಗ್ನಲ್ನಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ನಂತರ, ಅಕ್ಕ–ಪಕ್ಕದಲ್ಲಿದ್ದ ಮತ್ತೊಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಕ್ಕೂ ಆಂಬುಲೆನ್ಸ್ ಗುದ್ದಿತ್ತು’ ಎಂದು ಪೊಲೀಸರು ಹೇಳಿದರು.