ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ಹೆಡ್‌ ಕಾನ್‌ಸ್ಟೆಬಲ್ ದುರ್ಮರಣ

Last Updated 4 ಫೆಬ್ರುವರಿ 2020, 5:09 IST
ಅಕ್ಷರ ಗಾತ್ರ

ಬೆಂಗಳೂರು: ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ನಂದಿನಿ ಲೇಔಟ್ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಭಕ್ತರಾಮ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗೊರೆಗುಂಟೆಪಾಳ್ಯ ಬಳಿ ಸೋಮವಾರ ರಾತ್ರಿ ನಡೆದಿದೆ.

ಎಂಇಎಸ್ ರಿಂಗ್ ರಸ್ತೆಯಲ್ಲಿ ಲಾರಿಯೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಕಿತ್ತು ಹೋದ ವಿಭಜಕದ ಬ್ಲಾಕ್ ಭಕ್ತರಾಮ್ ಚಲಾಯಿಸುತ್ತಿದ್ದ ಬೈಕ್‌ಗೆ ತಾಗಿದೆ.ಆಗ ರಸ್ತೆಗೆ ಬಿದ್ದ ಅವರಿಗೆ ಕಾರೊಂದು ಡಿಕ್ಕಿ ಹೊಡೆದಿದೆ.

ತೀವ್ರವಾಗಿ ಗಾಯಗೊಂಡ ಭಕ್ತರಾಮ್ ಅವರನ್ನು ತಕ್ಷಣ ಸಮೀಪದ ಪೀಪಲ್ಸ್ ಟ್ರೀ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.

ಭಕ್ತರಾಮ್ ಅವರಿಗೆ ಪತ್ನಿ, ಪ್ರಥಮ ವರ್ಷ ಪದವಿ ಕಲಿಯುತ್ತಿರುವ ಮಗಳು ಮತ್ತು ಐದನೇ ತರಗತಿಯಲ್ಲಿ ಕಲಿಯುತ್ತಿರುವ ಮಗ ಇದ್ದಾರೆ. ಕುಟುಂಬ ವಿದ್ಯಾರಣ್ಯಪುರದಲ್ಲಿ ನೆಲೆಸಿದೆ.

ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT