<p>ಹೊಸಕೋಟೆ: ಬೆಂಗಳೂರು- ಚೆನ್ನೈ ರಾಷ್ಟ್ರೀಯ ಹೆದ್ದಾರಿ ಗೊಟ್ಟಿಪುರ ಗೇಟ್ ಬಳಿ ಆಂಧ್ರಪ್ರದೇಶದ ಸರ್ಕಾರಿ ಸಾರಿಗೆ ಬಸ್ ಮತ್ತು ಲಾರಿ ನಡುವೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದಾರೆ.</p>.<p>ಬಸ್ನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಶಾರದಾ(45) ಎಂಬುವವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಮೃತಪಟ್ಟ ಎಲ್ಲರೂ ಆಂಧ್ರಪ್ರದೇಶ ದವರು. ಕೇಶವರೆಡ್ಡಿ ಎಂಬುವವರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. 16 ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಹಾಗೂ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ಬೆಂಗಳೂರು- ಚೆನ್ನೈ ರಾಷ್ಟ್ರೀಯ ಹೆದ್ದಾರಿ ಗೊಟ್ಟಿಪುರ ಗೇಟ್ ಬಳಿ ಆಂಧ್ರಪ್ರದೇಶದ ಸರ್ಕಾರಿ ಸಾರಿಗೆ ಬಸ್ ಮತ್ತು ಲಾರಿ ನಡುವೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಒಂದೂವರೆ ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದಾರೆ.</p>.<p>ಬಸ್ನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಶಾರದಾ(45) ಎಂಬುವವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.</p>.<p>ಮೃತಪಟ್ಟ ಎಲ್ಲರೂ ಆಂಧ್ರಪ್ರದೇಶ ದವರು. ಕೇಶವರೆಡ್ಡಿ ಎಂಬುವವರು ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. 16 ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಹಾಗೂ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್, ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>