ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹದಗೆಟ್ಟ ರಸ್ತೆ: ಬೈಕ್‌ನಿಂದ ಬಿದ್ದ ಬಾಲಕನ ಮೇಲೆ ಹರಿದ ಸೇನಾ ವಾಹನ

Last Updated 11 ಆಗಸ್ಟ್ 2022, 21:11 IST
ಅಕ್ಷರ ಗಾತ್ರ

ಕೆ.ಆರ್.ಪುರ: ಹದಗೆಟ್ಟ ರಸ್ತೆಯಿಂದಾಗಿ ಬಾಲಕನೊಬ್ಬ ಸಾವಿಗೀಡಾದ ಘಟನೆ ಬೆಂಗಳೂರಿನ ಕೆ.ಆರ್.ಪುರದಲ್ಲಿ ನಡೆದಿದೆ. ತಂದೆ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ಜೀವನ್ (10) ಮೃತ ದುರ್ದೈವಿ.

ಮೃತ ಬಾಲಕನ ತಂದೆ ಪೊಲೀಸ್ ಹೆಡ್ ಕಾನ್ಸ್‌ಟೆಬಲ್‌ ಆಗಿದ್ದು, ಸಂಜೆ ಮಗನ ಜೊತೆ ಬೈಕ್‌ನಲ್ಲಿ ಕೆ.ಆರ್‌.ಪುರದ ಮಾರುಕಟ್ಟೆಗೆ ಹೋಗುತ್ತಿದ್ದರು. ಇತ್ತೀಚಿಗೆ ಸುರಿದ ಮಳೆಯಿಂದ ರಸ್ತೆ ಹದಗೆಟ್ಟಿತ್ತು. ರಸ್ತೆಯಲ್ಲಿ ಹರಡಿಕೊಂಡಿದ್ದ ಪುಡಿ ಜಲ್ಲಿಯಿಂದಾಗಿ ಬೈಕ್ ಸ್ಕಿಡ್ ಆಗಿದ್ದು, ಬಾಲಕ ಆಯತಪ್ಪಿ ರಸ್ತೆ ಮೇಲೆ ಬಿದ್ದಿದ್ದಾನೆ. ಹಿಂದೆಯಿಂದ ಬಂದ ಸೇನೆಗೆ ಸೇರಿದ ವಾಹನ ಆತನ ಮೇಲೆ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಾಹನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT