ಮೃತ ಬಾಲಕನ ತಂದೆ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆಗಿದ್ದು, ಸಂಜೆ ಮಗನ ಜೊತೆ ಬೈಕ್ನಲ್ಲಿ ಕೆ.ಆರ್.ಪುರದ ಮಾರುಕಟ್ಟೆಗೆ ಹೋಗುತ್ತಿದ್ದರು. ಇತ್ತೀಚಿಗೆ ಸುರಿದ ಮಳೆಯಿಂದ ರಸ್ತೆ ಹದಗೆಟ್ಟಿತ್ತು. ರಸ್ತೆಯಲ್ಲಿ ಹರಡಿಕೊಂಡಿದ್ದ ಪುಡಿ ಜಲ್ಲಿಯಿಂದಾಗಿ ಬೈಕ್ ಸ್ಕಿಡ್ ಆಗಿದ್ದು, ಬಾಲಕ ಆಯತಪ್ಪಿ ರಸ್ತೆ ಮೇಲೆ ಬಿದ್ದಿದ್ದಾನೆ. ಹಿಂದೆಯಿಂದ ಬಂದ ಸೇನೆಗೆ ಸೇರಿದ ವಾಹನ ಆತನ ಮೇಲೆ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.