ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಮೊಹಮ್ಮದ್‌ ನಲಪಾಡ್‌ಗೆ ನೋಟಿಸ್

Last Updated 11 ಫೆಬ್ರುವರಿ 2020, 9:06 IST
ಅಕ್ಷರ ಗಾತ್ರ

ಬೆಂಗಳೂರು: ಮೇಖ್ರಿ ವೃತ್ತ ಸಮೀಪದ ಕೆಳಸೇತುವೆಯಲ್ಲಿ ಸಂಭವಿಸಿದ್ದ ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್‌ಗೆ ಸದಾಶಿವನಗರ ಸಂಚಾರ ಪೊಲೀಸರು ನೋಟಿಸ್ ನೀಡಿದ್ದಾರೆ.

ಅಪಘಾತದ ವೇಳೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಠಾಣೆಗೆ ಬಂದು ತನ್ನದೇ ಕಾರು ಎಂದಿದ್ದ. ಆದರೆ, ಆತನ ಹೇಳಿಕೆಯಲ್ಲಿ ಗೊಂದಲ ಇದೆ. ಅನುಮಾನವೂ ಉಂಟಾಗಿದೆ. ಹೀಗಾಗಿ ನೋಟಿಸ್ ನೀಡಲಾಗಿದ್ದು, ವಿಚಾರಣೆ ಬಳಿಕವೇ ನಿಖರ ಮಾಹಿತಿ ತಿಳಿಯಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

ಅಪಘಾತ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರು ಗಾಯಗೊಂಡಿದ್ದು, 6 ವರ್ಷದ ಬಾಲಕನೂ ಇದ್ದಾನೆ.

ಈ ಹಿಂದೆ ಉದ್ಯಮಿ ಲೋಕನಾಥ್ ಅವರ ಮಗ ವಿದ್ವತ್ ಮೇಲೆ ಹಲ್ಲೆ ಮಾಡಿದ್ದ ನಲಪಾಡ್, ಜೈಲುವಾಸ ಅನುಭವಿಸಿದ್ದ. ಜಾಮೀನು ಮೇಲೆ ಹೊರಗೆ ಬಂದಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT