‘2019ರಲ್ಲಿ ರಸ್ತೆ ಅಪಘಾತದಲ್ಲಿ 49,571 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಬೆಂಗಳೂರಿನವರೇ ಅಧಿಕ. ನಗರದ ಜನಸಂಖ್ಯೆ ಒಂದು ಕೋಟಿ ದಾಟಿದೆ. ಶೇ 50ರಷ್ಟು ಜನರು ಕನಿಷ್ಠ ಒಂದು ವಾಹನವನ್ನು ಹೊಂದಿದ್ದಾರೆ. ಸಂಚಾರ ನಿಯಮಗಳು ಮತ್ತು ಆಧುನಿಕ ತಂತ್ರಜ್ಞಾನದ ಉಪಕರಣಗಳಿಂದ ಸಂಚಾರ ಸಮಸ್ಯೆ ನಿವಾರಿಸಲು ಸಾಧ್ಯವಿಲ್ಲ. ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಹೆಚ್ಚಬೇಕು. ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಯಡಿಯೂರಪ್ಪ ಹೇಳಿದರು.