’ಸವಾರ ಜಗದೀಶ್ ಆಚಾರಿ, ಗುರುವಾರ ನಸುಕಿನಲ್ಲಿ ಕೋರಮಂಗಲದ ಕಡೆಯಿಂದ ಇಂದಿರಾನಗರದ ಕಡೆಗೆ ಬರುತ್ತಿದ್ದರು. ಮಾರ್ಗಮಧ್ಯೆ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಬೈಕ್ ಗುದ್ದಿಸಿದ್ದರು. ರಸ್ತೆಯಲ್ಲಿ ಬೈಕ್ ಉರುಳಿಬಿದ್ದಿತ್ತು. ತೀವ್ರ ಗಾಯಗೊಂಡಿದ್ದ ಜಗದೀಶ್, ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.