‘ರಸ್ತೆ ಅಪಘಾತಗಳಲ್ಲಿ ಶೇ 47ರಷ್ಟು ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳೇ ಮೃತಪಡುತ್ತಿದ್ದಾರೆ. ಅಪಘಾತಗಳಲ್ಲಿ ಮೃತಪಡುವವರ ಪ್ರಮಾಣವನ್ನು ಪ್ರತಿ ವರ್ಷ ಶೇ 10ರಷ್ಟು ಕಡಿಮೆ ಮಾಡಲು ಸುಪ್ರೀಂಕೋರ್ಟ್ ಆದೇಶಿಸಿದೆ. ಅಪಘಾತ ಸ್ಥಳಕ್ಕೆ ಆಂಬುಲೆನ್ಸ್ಗಳು 12 ನಿಮಿಷಗಳಿಂದ 16 ನಿಮಿಷದೊಳಗೆ ತಲುಪುತ್ತಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಲಾಗುತ್ತಿದೆ. ಇದರಿಂದಾಗಿ ಸಾವಿನ ಪ್ರಮಾಣ ತಗ್ಗಿದೆ’ ಎಂದು ಹೇಳಿದರು.