ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಸಿದ್ಧಾರ್ಥನಗರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಮುನಿಯಪ್ಪ, ‘ರಸ್ತೆಯನ್ನು ಬಂದ್ ಮಾಡುವುದಕ್ಕೆ ಅವಕಾಶ ಇಲ್ಲ. ಭಾರಿ ವಾಹನಗಳು ಸಂಚರಿಸದಂತೆ ತಡೆಯಲು ಮೊದಲಿಗೆ ಎರಡು ಕಂಬಗಳನ್ನು ಎರಡು ಬದಿಗಳಲ್ಲಿ ನೆಡಲಾಗಿತ್ತು. ಆದರೆ, ಈಗ ದ್ವಿಚಕ್ರ ವಾಹನಗಳು ಸಂಚರಿಸದಂತೆ ನಿರ್ಬಂಧ ಹೇರಿರುವುದು ಸರಿಯಲ್ಲ. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.