<p><strong>ಯಲಹಂಕ:</strong> <strong>'ಸರ್ಕಾರ ಈಗಾಗಲೇ ಶಾಸಕರಿಗೆ ₹25 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದರೂ ಹಣ ಮಾತ್ರ ಬಂದಿಲ್ಲ' ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</strong></p>.<p><strong>ಯಲಹಂಕದ ಕೆಂಪೇಗೌಡ ಮತ್ತು ಚೌಡೇಶ್ವರಿ ವಾರ್ಡ್ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ₹12 ಕೋಟಿ ವೆಚ್ಛದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ, ಮನೆಗಳಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.<br></strong></p>.<p><strong>'ಕ್ಷೇತ್ರದಲ್ಲಿ ರಸ್ತೆಗಳ ಸಮಸ್ಯೆ ದೊಡ್ಡದಾಗಿದೆ. ಯಲಹಂಕದಲ್ಲಿ ಶೀಘ್ರವೇ ಗುಂಡಿ ಮುಚ್ಚುವ ಕಾರ್ಯ ಆರಂಭಿಸಲಾಗುವುದು. ಉದ್ಯಾನ ಮತ್ತು ಕೆರೆಗಳ ನಿರ್ವಹಣೆಗೆ ಹಣ ಮಂಜೂರಾಗದೇ ತೊಂದರೆಯಾಗುತ್ತಿದೆ. ಕೂಡಲೇ ಸರ್ಕಾರ ಅಗತ್ಯ ಅನುದಾನ ಮಂಜೂರು ಮಾಡಬೇಕು' ಎಂದು ಒತ್ತಾಯಿಸಿದರು.</strong></p>.<p><strong>'ಇಂತಹ ಸನ್ನಿವೇಶದ ನಡುವೆಯೂ ವಿವಿಧ ಮೂಲಗಳಿಂದ ಅನುದಾನ ತಂದು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮ ವಹಿಸಿದ್ದೇನೆ' ಎಂದು ಹೇಳಿದರು.</strong></p>.<p><strong>ಬಿಬಿಎಂಪಿ ಮಾಜಿ ಸದಸ್ಯರಾದ ಚಂದ್ರಮ್ಮ ಕೆಂಪೇಗೌಡ, ಎಂ.ಮುನಿರಾಜು, ಬಿಜೆಪಿ ಮುಖಂಡರಾದ ಮುರಾರಿರಾಮು, ಈಶ್ವರ್, ವಿ.ಪವನ್ಕುಮಾರ್, ವಿ.ವಿ.ರಾಮಮೂರ್ತಿ, ಎ.ಎಸ್. ರಾಜ, ಈಶ್ವರಪ್ಪ, ಮುನಿಯಪ್ಪ, ಓಂ ರವೀಂದ್ರ ಹಾಜರಿದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> <strong>'ಸರ್ಕಾರ ಈಗಾಗಲೇ ಶಾಸಕರಿಗೆ ₹25 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದರೂ ಹಣ ಮಾತ್ರ ಬಂದಿಲ್ಲ' ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.</strong></p>.<p><strong>ಯಲಹಂಕದ ಕೆಂಪೇಗೌಡ ಮತ್ತು ಚೌಡೇಶ್ವರಿ ವಾರ್ಡ್ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ₹12 ಕೋಟಿ ವೆಚ್ಛದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ, ಮನೆಗಳಿಗೆ ಕಾವೇರಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.<br></strong></p>.<p><strong>'ಕ್ಷೇತ್ರದಲ್ಲಿ ರಸ್ತೆಗಳ ಸಮಸ್ಯೆ ದೊಡ್ಡದಾಗಿದೆ. ಯಲಹಂಕದಲ್ಲಿ ಶೀಘ್ರವೇ ಗುಂಡಿ ಮುಚ್ಚುವ ಕಾರ್ಯ ಆರಂಭಿಸಲಾಗುವುದು. ಉದ್ಯಾನ ಮತ್ತು ಕೆರೆಗಳ ನಿರ್ವಹಣೆಗೆ ಹಣ ಮಂಜೂರಾಗದೇ ತೊಂದರೆಯಾಗುತ್ತಿದೆ. ಕೂಡಲೇ ಸರ್ಕಾರ ಅಗತ್ಯ ಅನುದಾನ ಮಂಜೂರು ಮಾಡಬೇಕು' ಎಂದು ಒತ್ತಾಯಿಸಿದರು.</strong></p>.<p><strong>'ಇಂತಹ ಸನ್ನಿವೇಶದ ನಡುವೆಯೂ ವಿವಿಧ ಮೂಲಗಳಿಂದ ಅನುದಾನ ತಂದು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮ ವಹಿಸಿದ್ದೇನೆ' ಎಂದು ಹೇಳಿದರು.</strong></p>.<p><strong>ಬಿಬಿಎಂಪಿ ಮಾಜಿ ಸದಸ್ಯರಾದ ಚಂದ್ರಮ್ಮ ಕೆಂಪೇಗೌಡ, ಎಂ.ಮುನಿರಾಜು, ಬಿಜೆಪಿ ಮುಖಂಡರಾದ ಮುರಾರಿರಾಮು, ಈಶ್ವರ್, ವಿ.ಪವನ್ಕುಮಾರ್, ವಿ.ವಿ.ರಾಮಮೂರ್ತಿ, ಎ.ಎಸ್. ರಾಜ, ಈಶ್ವರಪ್ಪ, ಮುನಿಯಪ್ಪ, ಓಂ ರವೀಂದ್ರ ಹಾಜರಿದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>