ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಅಖಂಡ ಶ್ರೀನಿವಾಸಮೂರ್ತಿ ಪ್ರಶ್ನೆಗೆ ಉತ್ತರಿಸಿದ ಅವರು, ‘ಟಿಡಿಆರ್ ಪಡೆಯಲು ಭೂಮಾಲೀಕರು ನಿರಾಕರಿಸುತ್ತಿದ್ದಾರೆ. ಮೆಟ್ರೊ ಯೋಜನೆಯಲ್ಲಿ ನೀಡಿರುವಂತೆ ನಗದು ರೂಪದಲ್ಲಿ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಭೂಸ್ವಾಧೀನ ಪ್ರಕ್ರಿಯೆ ವಿಳಂಬವಾಗಿದೆ’ ಎಂದರು.