<p><strong>ಬೆಂಗಳೂರು: </strong>ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಕೃಷ್ಣ ರಾಜೇಂದ್ರ (ಕೆ.ಆರ್.ರಸ್ತೆ) ರಸ್ತೆಯ ಸಾಲು ಸಾಲು ಗುಂಡಿಗಳಿಗೆ ಮುಕ್ತಿ ಸಿಕ್ಕಿದೆ. ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ ಗರುಡಾಚಾರ್ ಕಚೇರಿ ಮುಂಭಾಗದಲ್ಲಿ ಡಾಂಬರು ಕಿತ್ತು ಹೋಗಿದ್ದ ರಸ್ತೆಯನ್ನೂ ದುರಸ್ತಿ ಮಾಡಲಾಗಿದೆ.</p>.<p>ಲಾಲ್ಬಾಗ್ ಪಶ್ಚಿಮದ್ವಾರದ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಸಾಗುವ ವಾಹನಗಳು ಸರ್ವಿಸ್ ರಸ್ತೆಯ ಮೂಲಕ ನ್ಯಾಷನಲ್ ಕಾಲೇಜು ಜಂಕ್ಷನ್ನಲ್ಲಿ ಕೆ.ಆರ್. ರಸ್ತೆಗೆ ಸಂಪರ್ಕ ಸಾಧಿಸಬೇಕಿದೆ. ಆದರೆ, ಗುಂಡಿಗಳಿಂದ ಕೂಡಿದ್ದ ಸರ್ವಿಸ್ ರಸ್ತೆಯಲ್ಲಿ ಸಾಗಲು ವಾಹನ ಸವಾರರು ಹರಸಾಹಸ ಪಡಬೇಕಿತ್ತು. ಈ ಸಮಸ್ಯೆಯ ಬಗ್ಗೆ ‘ಪ್ರಜಾವಾಣಿ’ ನ.28ಕ್ಕೆ ‘ಶಾಸಕರ ಕಚೇರಿ ಎದುರೇ ಗುಂಡಿ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಶಾಸಕರು ಗುಂಡಿಗಳನ್ನು ಮುಚ್ಚಿಸಿದ್ದು, ‘ಶೀಘ್ರದಲ್ಲೇ ಹೊಸದಾಗಿ ಡಾಂಬರೀಕರಣ ಮಾಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p>.<p>ಕಸದ ತೊಟ್ಟಿಯಾಗಿ ಮಾರ್ಪಟ್ಟಿದ್ದ ಕೆ.ಆರ್. ರಸ್ತೆಯ ಟ್ಯಾಗೋರ್ ವೃತ್ತದ ಕೆಳಸೇತುವೆಯನ್ನು ಸ್ವಚ್ಛಗೊಳಿಸಲಾಗಿದೆ. ಕಸದಿಂದಾಗಿ ಕೆಳಸೇತುವೆಯಲ್ಲಿ ನೀರು ನಿಲ್ಲುತ್ತಿತ್ತು. ಮಳೆ ಬಂದಾಗ ರಸ್ತೆ ಹೊಳೆಯ ಸ್ವರೂಪ ಪಡೆದುಕೊಳ್ಳುವುದರಿಂದ ವಾಹನ ಸವಾರರು ಕೊಳಚೆ ನೀರಿನಲ್ಲೇ ಸಾಗಬೇಕಾಗಿತ್ತು. ಇದೀಗ ಕಸ ಹಾಕದಂತೆ ಸೂಚನಾ ಫಲಕ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಕೃಷ್ಣ ರಾಜೇಂದ್ರ (ಕೆ.ಆರ್.ರಸ್ತೆ) ರಸ್ತೆಯ ಸಾಲು ಸಾಲು ಗುಂಡಿಗಳಿಗೆ ಮುಕ್ತಿ ಸಿಕ್ಕಿದೆ. ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ ಗರುಡಾಚಾರ್ ಕಚೇರಿ ಮುಂಭಾಗದಲ್ಲಿ ಡಾಂಬರು ಕಿತ್ತು ಹೋಗಿದ್ದ ರಸ್ತೆಯನ್ನೂ ದುರಸ್ತಿ ಮಾಡಲಾಗಿದೆ.</p>.<p>ಲಾಲ್ಬಾಗ್ ಪಶ್ಚಿಮದ್ವಾರದ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕನೆಟ್ಟಕಲ್ಲಪ್ಪ ವೃತ್ತದ ಕಡೆಗೆ ಸಾಗುವ ವಾಹನಗಳು ಸರ್ವಿಸ್ ರಸ್ತೆಯ ಮೂಲಕ ನ್ಯಾಷನಲ್ ಕಾಲೇಜು ಜಂಕ್ಷನ್ನಲ್ಲಿ ಕೆ.ಆರ್. ರಸ್ತೆಗೆ ಸಂಪರ್ಕ ಸಾಧಿಸಬೇಕಿದೆ. ಆದರೆ, ಗುಂಡಿಗಳಿಂದ ಕೂಡಿದ್ದ ಸರ್ವಿಸ್ ರಸ್ತೆಯಲ್ಲಿ ಸಾಗಲು ವಾಹನ ಸವಾರರು ಹರಸಾಹಸ ಪಡಬೇಕಿತ್ತು. ಈ ಸಮಸ್ಯೆಯ ಬಗ್ಗೆ ‘ಪ್ರಜಾವಾಣಿ’ ನ.28ಕ್ಕೆ ‘ಶಾಸಕರ ಕಚೇರಿ ಎದುರೇ ಗುಂಡಿ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಶಾಸಕರು ಗುಂಡಿಗಳನ್ನು ಮುಚ್ಚಿಸಿದ್ದು, ‘ಶೀಘ್ರದಲ್ಲೇ ಹೊಸದಾಗಿ ಡಾಂಬರೀಕರಣ ಮಾಡಲಾಗುವುದು’ ಎಂದು ಭರವಸೆ ನೀಡಿದ್ದಾರೆ.</p>.<p>ಕಸದ ತೊಟ್ಟಿಯಾಗಿ ಮಾರ್ಪಟ್ಟಿದ್ದ ಕೆ.ಆರ್. ರಸ್ತೆಯ ಟ್ಯಾಗೋರ್ ವೃತ್ತದ ಕೆಳಸೇತುವೆಯನ್ನು ಸ್ವಚ್ಛಗೊಳಿಸಲಾಗಿದೆ. ಕಸದಿಂದಾಗಿ ಕೆಳಸೇತುವೆಯಲ್ಲಿ ನೀರು ನಿಲ್ಲುತ್ತಿತ್ತು. ಮಳೆ ಬಂದಾಗ ರಸ್ತೆ ಹೊಳೆಯ ಸ್ವರೂಪ ಪಡೆದುಕೊಳ್ಳುವುದರಿಂದ ವಾಹನ ಸವಾರರು ಕೊಳಚೆ ನೀರಿನಲ್ಲೇ ಸಾಗಬೇಕಾಗಿತ್ತು. ಇದೀಗ ಕಸ ಹಾಕದಂತೆ ಸೂಚನಾ ಫಲಕ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>